Webdunia - Bharat's app for daily news and videos

Install App

ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲೆ ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ

Webdunia
ಮಂಗಳವಾರ, 19 ಡಿಸೆಂಬರ್ 2017 (08:13 IST)
ಮಂಗಳೂರು: ಗುಜರಾತ್ ಹಾಗು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಸಂತಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾತ್ರಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ವಿಮಾನದಲ್ಲಿ ರಾತ್ರಿ 11.45ಕ್ಕೆ ಮಂಗಳೂರಿಗೆ ಆಗಮಿಸಿದ ಅವರನ್ನು ಮಂಗಳೂರಿನ ಜನತೆ ಆದರದಿಂದ ಸ್ವಾಗತಿಸಿದರು.


ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಪಕ್ಷದ ಕಾರ್ಯಕರ್ತರಿಗೆ ಹಾಗು ಜನತೆಗೆ ಕೈ ಬೀಸಿ ಮೋದಿಯವರು ಗೆಲುವಿನ ಖುಷಿ ಹಂಚಿಕೊಂಡಿದ್ದಾರೆ. ಅಲ್ಲಿ ಕೇಂದ್ರ ಸಚಿವ ರಾಧಾಕೃಷ್ಣನ್, ಜಿಲ್ಲಾಧಿಕಾರಿ ಸಸಿಕಾಂತ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣೆ ರಾಜು ಮೊದಲಾದವರು ಇದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
ಮೋದಿಯವರು ಅಲ್ಲಿಂದ ಸರ್ಕಾರಿ ಅತಿಥಿ ಗೃಹಕ್ಕೆ ತೆರಳಿದರು.


ಇಂದು ವಿಮಾನದಲ್ಲಿ ಕೊಚ್ಚಿಗೆ ತೆರಳಿ, ಓಖ್ಹಿ ಚಂಡಮಾರುತದಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿನೀಡಲಿದ್ದಾರೆ. ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments