Webdunia - Bharat's app for daily news and videos

Install App

ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

Webdunia
ಶನಿವಾರ, 25 ಮಾರ್ಚ್ 2023 (08:48 IST)
ಬೆಂಗಳೂರು : ಚುನಾವಣೆ ಹೊತ್ತಲ್ಲಿ ಬಿಜೆಪಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಇಂದು (ಮಾ.25) ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ಯ ಸಮಾರೋಪ ಸಮಾರಂಭ ಹಾಗೂ ಬೆಂಗಳೂರಿನಲ್ಲಿ ಕೆ.ಆರ್.ಪುರಂ ಮತ್ತು ವೈಟ್ ಫೀಲ್ಡ್ ನಡುವಿನ ಮೆಟ್ರೋ ಉದ್ಘಾಟನೆಗೆ ಮೋದಿ ಬರುತ್ತಿದ್ದಾರೆ.

ಬಹುನೀರಿಕ್ಷೀತ ಕೆ.ಆರ್.ಪುರ ಮತ್ತು ವೈಟ್ ಫೀಲ್ಡ್ ನಡುವಿನ ಮೆಟ್ರೋ ಉದ್ಘಾಟನೆ ಕೂಡ ಇಂದು ಪ್ರಧಾನಿ ಮೋದಿ ಅವರಿಂದ ಆಗಲಿದೆ. 4500 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರೋ ಹೊಸ ಮೆಟ್ರೋ ಮಾರ್ಗ ಇಂದು ಲೋಕಾರ್ಪಣೆಗೊಳ್ಳಲಿದೆ. ಮಧ್ಯಾಹ್ನ 13:55ಕ್ಕೆ ಪ್ರಧಾನಿಗಳು ಎಚ್ಎಎಲ್ನಿಂದ ರಸ್ತೆ ಮೂಲಕ ನೇರವಾಗಿ ವೈಟ್ ಫೀಲ್ಡ್ನ ಕಾಡುಗೋಡಿ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

1 ಗಂಟೆಯಿಂದ 1:35 ರ ಒಳಗೆ 13.71 ಕಿ.ಮೀ ಉದ್ದ ಮೆಟ್ರೋ ಮಾರ್ಗವನ್ನ ಉದ್ಘಾಟಿಸಲಿರೋ ನಮೋ, ಬಳಿಕ ಮೆಟ್ರೋ ಸಂಚಾರ ಕೂಡ ಮಾಡಲಿದ್ದಾರೆ. ವೈಟ್ ಫೀಲ್ಡ್ನ ಕಾಡುಗೋಡಿ ನಿಲ್ದಾಣದಿಂದ ಒಂದು ಕಿ.ಮೀ ದೂರದಲ್ಲಿರುವ ಚೆನ್ನಸಂದ್ರ ಮೆಟ್ರೋ ನಿಲ್ದಾಣದವರೆಗೆ ಹೊಸ ಮಾರ್ಗದಲ್ಲಿ ಸಂಚಾರ ಮಾಡಿ ಅಲ್ಲಿಂದ ನೇರವಾಗಿ ಮತ್ತೆ ಎಚ್ಎಎಲ್ಗೆ ತೆರಳಿ ಅಲ್ಲಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments