Webdunia - Bharat's app for daily news and videos

Install App

ಕೋಲಾರದಲ್ಲಿ ಖಾಸಗಿ ಬಸ್ ಅಪಘಾತ

Webdunia
ಬುಧವಾರ, 17 ಆಗಸ್ಟ್ 2022 (20:57 IST)
ಮುಳಬಾಗಿಲು ತಾಲೂಕಿನ ವಿರೂಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ, ಬಸ್‌ನಲ್ಲಿದ್ದ ಆಂಧ್ರಪ್ರದೇಶ ಮೂಲದ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ವಿಜಯವಾಡದ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂದು ಗುರುತಿಸಲಾಗಿದೆ.15 ಮಂದಿ ಗಾಯಾಳುಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಸ್‌ನಲ್ಲಿ‌ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು.ಆಂಧ್ರಪ್ರದೇಶದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಸ್ ಗೆ ಸೇರಿದ ಬಸ್ ಇದಾಗಿದ್ದು, ಗುಂಟೂರಿನಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಮುಂಜಾನೆ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರಬಹುದು ಎಂದು ಹೇಳಲಾಗುತ್ತಿದೆ.ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಹಾಗೂ ಕೋಲಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ ಪಲ್ಟಿಯಾದ ತಕ್ಷಣ ಬಸ್ ನ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments