ಕೋಲಾರದಲ್ಲಿ ಖಾಸಗಿ ಬಸ್ ಅಪಘಾತ

Webdunia
ಬುಧವಾರ, 17 ಆಗಸ್ಟ್ 2022 (20:57 IST)
ಮುಳಬಾಗಿಲು ತಾಲೂಕಿನ ವಿರೂಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ, ಬಸ್‌ನಲ್ಲಿದ್ದ ಆಂಧ್ರಪ್ರದೇಶ ಮೂಲದ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ವಿಜಯವಾಡದ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂದು ಗುರುತಿಸಲಾಗಿದೆ.15 ಮಂದಿ ಗಾಯಾಳುಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಸ್‌ನಲ್ಲಿ‌ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು.ಆಂಧ್ರಪ್ರದೇಶದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಸ್ ಗೆ ಸೇರಿದ ಬಸ್ ಇದಾಗಿದ್ದು, ಗುಂಟೂರಿನಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಮುಂಜಾನೆ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರಬಹುದು ಎಂದು ಹೇಳಲಾಗುತ್ತಿದೆ.ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಹಾಗೂ ಕೋಲಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ ಪಲ್ಟಿಯಾದ ತಕ್ಷಣ ಬಸ್ ನ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments