Webdunia - Bharat's app for daily news and videos

Install App

ಖಾಸಗಿ ಬಸ್ ದರ ಯದ್ವಾತದ್ವಾ ಏರಿಕೆ

Webdunia
ಬುಧವಾರ, 19 ಅಕ್ಟೋಬರ್ 2022 (16:00 IST)
ಖಾಸಗಿ ಬಸ್​ಗಳ ಆಟಾಟೋಪ ಇನ್ನೂ ನಿಂತಿಲ್ಲ. ಪ್ರತಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಮಾಲೀಕರು ಹಗಲು ದರೋಡೆ ಮಾಡ್ತಿದ್ದು, ದುಪ್ಪಟ್ಟು ದರ ವಸೂಲಿ ಮಾಡಿದ್ರೆ ಪರ್ಮೀಟ್ ರದ್ದು ಎಚ್ಚರಿಕೆ ನೀಡಿದ್ರೂ ಕ್ಯಾರೆ ಎನ್ನದ ಮಾಲೀಕರು ಪ್ರಯಾಣಿಕರ ಸುಲಿಗೆ ಮುಂದುವರೆಸಿದ್ದಾರೆ.  ದೀಪಾವಳಿ ಹಬ್ಬಕ್ಕೂ ಖಾಸಗಿ ಬಸ್ ಪ್ರಯಾಣ ವಿಮಾನದಷ್ಟೇ ದುಬಾರಿಯಾಗಿವೆ. ದುಪ್ಪಟ್ಟು ವಸೂಲಿ ಮಾಡೋ ಬಸ್ ಮಾಲೀಕರ ಮೇಲೆ ಕ್ರಮ ಕೈಗೊಳ್ಳೊಕೆ ಹಿಂದೇಟು ಹಾಕ್ತಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ದರ ಬರೋಬ್ಬರಿ ₹5000 ಆಗಿದೆ. ಅಕ್ಬೋಬರ್ 22ರ 4ನೇ ಶನಿವಾರ ಸೇರಿ ದೀಪಾವಳಿಗೆ 5 ದಿನಗಳ‌ ಕಾಲ ಸಾಲು ಸಾಲು ರಜೆ ಇದ್ದ ಕಾರಣ ಖಾಸಗಿ ಬಸ್ ದರ ಯದ್ವಾತದ್ವಾ ಏರಿಕೆಯಾಗಿವೆ. ಸಾರಿಗೆ ಇಲಾಖೆ ಹಾಗೂ ಸಚಿವರು ಹೆಸರಿಗಷ್ಟೇ ಕ್ರಮದ ಭರವಸೆ ನೀಡಿ ಸುಮ್ಮನೆ ಆಗ್ತಿದ್ದಾರೆ. ಖಾಸಗಿ ಬಸ್​ಗಳ ಅಕ್ರಮಕ್ಕೆ ಸಾಥ್ ನೀಡುತ್ತಿದ್ಯಾ ಸಾರಿಗೆ ಇಲಾಖೆ ಎಂದು ಪ್ರಶ್ನೆ ಉದ್ಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments