Select Your Language

Notifications

webdunia
webdunia
webdunia
webdunia

ಖಾಸಗಿ ಬಸ್ ದುರಂತ: ಖರ್ಗೆ ಸಂತಾಪ

ಖಾಸಗಿ ಬಸ್ ದುರಂತ: ಖರ್ಗೆ ಸಂತಾಪ
ಕಲಬುರಗಿ , ಶನಿವಾರ, 24 ನವೆಂಬರ್ 2018 (17:18 IST)
ಖಾಸಗಿ ಬಸ್ ಉರುಳಿ 25ಕ್ಕೂ ಹೆಚ್ಚು ಸಾವನ್ನಪ್ಪಿರುವ ಘಟನೆಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಸ್ ದುರಂತಕ್ಕೆ ಈಡಾಗಿರುವುದು ದುರ್ದೈವದ ಸಂಗತಿಯಾಗಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಬಸ್ ನಾಲೆಗೆ ಉರುಳಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ತಮಗೆ ದೊಡ್ಡ ಆಘಾತವುಂಟು ಮಾಡಿದೆ ಎಂದು ಹೇಳಿದ್ದಾರೆ.

ದುರ್ಘಟನೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತುಂಬಲಾರದ ನೋವಾಗಿದೆ. ಮೃತರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದರು. ದುರ್ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಘಟನೆಯಲ್ಲಿ ಗಾಯಗೊಂಡಿರುವವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಬೇಕು. ಈ ಘಟನೆ ನೋವುಂಟು ಮಾಡಿದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಬಸ್ ದುರಂತ: 25 ಸಾವು, ಸ್ಥಳಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ