Webdunia - Bharat's app for daily news and videos

Install App

ರೇಣುಕಾಸ್ವಾಮಿ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ: ಮಗುವಿಗಾದ್ರೂ ಒಳ್ಳೆ ಬುದ್ಧಿ ಕೊಡ್ಲಿ ಎಂದ ನೆಟ್ಟಿಗರು

Krishnaveni K
ಬುಧವಾರ, 16 ಅಕ್ಟೋಬರ್ 2024 (14:14 IST)
ಚಿತ್ರದುರ್ಗ: ದರ್ಶನ್ ಆಂಡ್ ಗ್ಯಾಂಗ್ ನಿಂದ ಹಲ್ಲೆಗೊಳಗಾದ ಪರಿಣಾಮ ಹತ್ಯೆಗೀಡಾದರು ಎನ್ನಲಾದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಬೆಳಿಗ್ಗೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ರೇಣುಕಾಸ್ವಾಮಿ ಪತ್ನಿಗೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆ ಉಚಿತವಾಗಿ ಡೆಲಿವರಿ ವ್ಯವಸ್ಥೆ ಮಾಡಿತ್ತು. ರೇಣುಕಾ ಕುಟುಂಬಕ್ಕೆ ಆಧಾರವಾಗಿದ್ದ. ಇದೀಗ ಆತನ ಸಾವಿನ ನಂತರ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಈ ಕಾರಣಕ್ಕೆ ಖಾಸಗಿ ಆಸ್ಪತ್ರೆಯೊಂದು ಉಚಿತವಾಗಿ ಹೆರಿಗೆ ಮಾಡಿಸಲು ಮುಂದಾಯಿತು.

ಮೊಮ್ಮಗುವಿನ ಆಗಮನದ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ, ಮಗನನ್ನೇ ನೋಡಿದಷ್ಟು ಸಂತೋಷವಾಯಿತು ಎಂದಿದ್ದಾರೆ. ಇನ್ನೊಂದೆಡೆ ಉಚಿತವಾಗಿ ಹೆರಿಗೆ ಮಾಡಿಸಿಕೊಟ್ಟ ಆಸ್ಪತ್ರೆಗೂ ಧನ್ಯವಾದ ಸಲ್ಲಿಸಿದ್ದಾರೆ.

ಆದರೆ ರೇಣುಕಾಗೆ ಮಗುವಾಗಿರುವ ಸುದ್ದಿ ತಿಳಿಯುತ್ತಿದ್ದಂತೇ ನೆಟ್ಟಿಗರು ಕೆಲವರು ಅವರ ಕುಟುಂಬಸ್ಥರಿಗೆ ಈ ಮಗುವಾದರೂ ಕೆಟ್ಟ ದಾರಿ ಹಿಡಿಯದಂತೆ ನೋಡಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ. ಮಗುವಿಗೆ ಒಳ್ಳೆಯ ಬುದ್ಧಿ ಕಲಿಸಿಕೊಡಿ, ಆದರ್ಶವಾಗಿ ಹೇಗಿರಬೇಕೆಂದು ಹೇಳಿಕೊಡಿ ಎಂದು ಸಲಹೆಯಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments