Webdunia - Bharat's app for daily news and videos

Install App

ವೈದ್ಯರ ಮೇಲೆ ಸಂಸದನ ಹಲ್ಲೆ ಕೇಸ್: ಉ.ಕ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಬಂದ್

Webdunia
ಶನಿವಾರ, 7 ಜನವರಿ 2017 (11:14 IST)
ವೈದ್ಯರ ಮೇಲೆ ಸಂಸದ ಅನಂತ್ ಕುಮಾರ್ ಹೆಗಡೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ಪ್ರತಿಭಟನೆ ಕೈಗೊಳ್ಳಲಾಗಿದೆ.
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಐಎಂಎ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಎಲ್ಲ ಖಾಸಗಿ ಆಸ್ಪತ್ರೆಗಳನ್ನು 2 ಗಂಟೆಗಳ ಕಾಲ ಬಂದ್ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ, ತುರ್ತು ಚಿಕಿತ್ಸೆಗಾಗಿ ಕೆಲವು ಕ್ಲಿನಿಕ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿದುಬಂದಿದೆ. 
 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳನ್ನು ವೈದ್ಯರು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments