Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕಿದ ಖಾಸಗಿ ಆಸ್ಪತ್ರೆಯವರು

Webdunia
ಭಾನುವಾರ, 17 ಜುಲೈ 2022 (16:03 IST)
ಕೇಂದ್ರ ಸರ್ಕಾರದ 75 ದಿನಗಳ ವಿಶೇಷ ಯೋಜನೆಯಡಿ ಉಚಿತವಾಗಿ ವ್ಯಾಕ್ಸಿನ್ ನೀಡಲಾಗ್ತಿದೆ.ಹೀಗಾಗಿ ಜನರು ಖಾಸಗಿ ಆಸ್ಪತ್ರೆ ವ್ಯಾಕ್ಸಿನ್ ಸೆಂಟರ್ ಬಿಟ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.ಕೇಂದ್ರ ಸರ್ಕಾರ ಜನರಿಗೆ ಅನುಕೂಲವಾಗ್ಲಿ ಎಲ್ಲ ವಯೋಮಾನದವರಿಗೂ ಲಸಿಕೆ ಸಿಗ್ಲಿ ಅಂತಾ ಉಚಿತವಾಗಿ ಲಸಿಕೆ ನೀಡಲು ಪ್ರಾರಂಭಿಸಿದ್ದಾರೆ.ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಸೆಂಟರ್ ಗಳಲ್ಲಿ ಲಸಿಕೆ ಕೊಡಲಾಗ್ತಿದೆ. ಹೀಗಾಗಿ ಯಾರು ಹಣಕೊಟ್ಟು ಲಸಿಕೆಯನ್ನು ಹಾಕಿಸಿಕೊಳ್ಳುತ್ತಾರೆ ಎಂದು ಎಷ್ಟೋ ಜನರು ಉಚಿತವಾಗಿ ಹಾಕ್ತಿರುವ ಸರ್ಕಾರಿ ಆಸ್ಪತ್ರೆ ಕಡೆಗೆ ಮುಖ ಮಾಡುತ್ತಿದ್ದಾರೆ. ಹೀಗಾಗಿ ಇದು ಖಾಸಗಿ ಆಸ್ಪತ್ರೆಗೆ  ದೊಡ್ಡ ತಲೆನೋವಾಗಿ ಪರಿಣಮಿಸಿದೆ.
 
ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್  ಹಣ ತೆಗೆದುಕೊಂಡು ಹಾಕ್ತಿದ್ರು.‌ಆದ್ರೆ  ಇದ್ದವರು ಹೇಗೋ ಹಣ ಕೊಟ್ಟು ಲಸಿಕೆ ಹಾಕಿಸಿಕೊಳ್ಳುತ್ತಿದ್ರು.  ಇಲ್ಲದವರು ಲಸಿಕೆ ಹಾಕಿಸಿಕೊಳ್ಳಲು ಇಷ್ಟುದಿನ ಮೀನಾಮೇಷ ಏಣಿಸುತ್ತಿದ್ರು.  ಈಗ ಉಚಿತವಾಗಿ ಬೂಸ್ಟರ್ ಡೋಸ್ ನೀಡ್ತಿರುವುದು ಕೆಳವರ್ಗದ ಜನರಿಗೆ ಬಹಳ ಅನುಕೂಲವಾದಂತಗಿದೆ.
ಇನ್ನು  ಖಾಸಗಿ ಆಸ್ಪತ್ರೆಯವರು ಇರುವಂತಹ ಲಸಿಕೆಯನ್ನ ಎಷ್ಟು ದಿನ ಅಂತಾ ಸ್ಟಾಕ್ ಇಟ್ಟು ಕೊಳ್ಳುವುದೆಂದು ಚಿಂತಿಸುತ್ತಿದ್ದಾರೆ. ಅಷ್ಟೆ ಅಲ್ಲದೇ ತುಂಬ ದಿನ ಲಸಿಕೆ ಸ್ಟೋರ್ ಮಾಡಿ ಇಡಲು ಸಾಧ್ಯವಿಲ್ಲ.ಆಸ್ಪತ್ರೆಯಲ್ಲಿ ಶೇಖರಣೆ ಮಾಡಿಟ್ಟ ವ್ಯಾಕ್ಸಿನ್ ಜನರು ಹಾಕಿಸಿಕೊಂಡಿಲ್ಲ ಅಂದ್ರೆ ವ್ಯರ್ಥವಾಗಲಿದೆ ಎಂದು ಖಾಸಗಿ ಆಸ್ಪತ್ರೆಯವರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.ಅಷ್ಟೇ ಅಲ್ಲದೇ  ಸರ್ಕಾರದ ನಿರ್ಧಾರದಿಂದ ಖಾಸಗಿ ಆಸ್ಪತ್ರೆಗಳು ಇಕ್ಕಟ್ಟಿಗೆ ಸಿಲುಕುವಂತಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments