ಮುಸ್ಲಿಮರಿಗೆ ಮೋದಿ ಗಿಫ್ಟ್ ಕೊಟ್ಟರೆ ಓಲೈಕೆ ಆಗಲ್ವಾ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Krishnaveni K
ಬುಧವಾರ, 26 ಮಾರ್ಚ್ 2025 (14:51 IST)
ಬೆಂಗಳೂರು: ಸೌಗತ್ ಇ ಮೋದಿ ಹೆಸರಿನಲ್ಲಿ ಮುಸ್ಲಿಮರಿಗೆ ಬಿಜೆಪಿಯವರು ಗಿಫ್ಟ್ ಕೊಟ್ಟರೆ ಓಲೈಕೆ ಎನಿಸಿಕೊಳ್ಳಲ್ವಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಈಗ ದೇಶದ ಬಡ ಮುಸ್ಲಿಂ ಕುಟುಂಬಕ್ಕೆ ಈದ್ ಹಬ್ಬ ಆಚರಿಸಲು ಸೌಗತ್ ಇ ಮೋದಿ ಎಂಬ ಹೆಸರಿನಲ್ಲಿ ಗಿಫ್ಟ್ ಪ್ಯಾಕೆಟ್ ಕೊಡಲು ಮುಂದಾಗಿದ್ದಾರೆ. ಈ ಗಿಫ್ಟ್ ಪ್ಯಾಕೆಟ್ ನಲ್ಲಿ ಈದ್ ಹಬ್ಬ ಆಚರಿಸಲು ಬೇಕಾದ ಎಲ್ಲಾ ವಸ್ತುಗಳೂ ಇರಲಿವೆ.

ಇದರ ಬಗ್ಗೆ ಈಗ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದನ್ನು ಬಿಜೆಪಿ ಮುಸ್ಲಿಂ ಓಲೈಕೆ ಎಂದಿತ್ತು. ಕಾಂಗ್ರೆಸ್ ಮುಸ್ಲಿಮರನ್ನು ಓಲೈಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದೆ ಎಂದಿತ್ತು.

ಈಗ ಬಿಜೆಪಿಯೇ ಮುಸ್ಲಿಮರಿಗೆ ಗಿಫ್ಟ್ ನೀಡಲು ಮುಂದಾಗಿರುವುದನ್ನು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ‘ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಸ್ಲಿಮರನ್ನು ಒಬಿಸಿ ವರ್ಗಕ್ಕೆ ಸೇರಿಸಿದ್ದಾರೆ. ನಾಲ್ಕು ಕಮಿಷನ್ ಗಳು ಮುಸ್ಲಿಮರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದೆ ತರಲು ಮೀಸಲಾತಿ ನೀಡಬೇಕು ಎಂದಿದ್ದಾರೆ. ಈ ಕಮಿಷನ್ ಮುಖ್ಯಸ್ಥರೆಲ್ಲಾ ಮುಸ್ಲಿಮರಾಗಿದ್ದರಾ? ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇದೆಯಾ’ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಮುಂದಿನ ಸುದ್ದಿ
Show comments