ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್ ಖರ್ಗೆ ಟೀಕೆ ಹಿಂದಿದೆ ಮಹಾ ಉದ್ದೇಶ: ವಿಜಯೇಂದ್ರ

Sampriya
ಮಂಗಳವಾರ, 21 ಅಕ್ಟೋಬರ್ 2025 (17:19 IST)
ಬೆಂಗಳೂರು: ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್‌ಎಸ್‌ಎಸ್‌ ಪಥ ಸಂಚಲನ ನಡೆದೇ ನಡೆಯುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಅವರು ಪ್ರಿಯಾಂಕ್ ಖರ್ಗೆಗೆ RSS ಬಗ್ಗೆ ಟೀಕೆ ಮಾಡೋ ದುರ್ಬುದ್ಧಿ ಯಾಕೆ ಬಂದಿದೆಯೋ ಗೊತ್ತಿಲ್ಲ. ಇದರ ಹಿಂದೆ ಪ್ರಚಾರಕ್ಕೂ ಅಥವಾ ಸಿಎಂ ಕುರ್ಚಿಗೆ ಟವಲ್ ಹಾಕುವ ವಿಚಾರಕ್ಕೂ ತಿಳಿದಿಲ್ಲ ಎಂದರು. 

ಇನ್ನು ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದಂತೆ ಪ್ರಿಯಾಂಕ್ ಖರ್ಗೆ ಏಕಾಂಗಿಯಾಗಿದ್ದಾರೆ.  ಗಾಂಧಿ ಕುಟುಂಬದಿಂದಲೇ RSS ಮಣಿಸೋಕೆ ಆಗಲಿಲ್ಲ. ಇಂತಹ ಹೇಳಿಕೆ ನಿತ್ಯ ಕೊಡೋ ಮೂಲಕ ವಾಸ್ತವಿಕ ಸತ್ಯ ಮರೆ ಮಾಚೋ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದರು. 

ಆಡಳಿತ ಪಕ್ಷದ ವೈಫಲ್ಯವನ್ನು ಮುಚ್ಚಿಹಾಕುವ ಸಲುವಾಗಿ ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡುತ್ತಿದ್ದಾರೆ. 

ಇನ್ನೂ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥ ಸಂಚಲನ ನಡೆದೆ ನಡೆಯುತ್ತೆ. ಹೈಕೋರ್ಟ್ ಕೂಡ ಹೇಳಿದೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗ್ತಿದೆ. ಹಾಗೇ ಚಿತ್ತಾಪುರದಲ್ಲಿ ನಡೆಯುತ್ತದೆ. 

ಬಿಜೆಪಿ ಅವರು ಸೀಳು ನಾಯಿಗಳು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ಅಪ್ರಬುದ್ಧ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ದುಷ್ಟ, ಟಿವಿಕೆ ಶುದ್ಧ ಶಕ್ತಿ: ಕರೂರ್ ದುರಂತದ ಬಳಿಕ ವಿಜಯ್ ಮೊದಲ ರ್ಯಾಲಿ

ಮಹಿಳಾ ಪೊಲೀಸ್ ಅಧಿಕಾರಿಯ ಸರವನ್ನೇ ಎಗರಿಸಿದ ಖದೀಮರು, ಎಲ್ಲಿ ಗೊತ್ತಾ

ಟೇಕ್‌ ಆಫ್ ವೇಳೆ ಟೈರ್‌ ಬ್ಲಾಸ್ಟ್, ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶವಾದ ಏರ್ ಇಂಡಿಯಾ ಫ್ಲೈಟ್‌

ವಿದೇಶಕ್ಕೆ ಹೋಗಿ ಮತ್ತೆ ಭಾರತವನ್ನು ಟೀಕಿಸಿದ ರಾಹುಲ್ ಗಾಂಧಿ

ಪ್ರೀತಿ ಹೆಸರಿನಲ್ಲಿ ಸ್ನೇಹಿತರೊಂದಿಗೆ ಯುವತಿ ಮೇಲೆ ಗ್ಯಾಂಗ್ ರೇಪ್‌, 3ಅರೆಸ್ಟ್‌

ಮುಂದಿನ ಸುದ್ದಿ
Show comments