Select Your Language

Notifications

webdunia
webdunia
webdunia
webdunia

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

Priyank Kharge
ಬೆಂಗಳೂರು: ನೀಟ್ 2026 ಪ್ರಶ್ನೆಪತ್ರಿಕೆ ಅಕ್ರಮದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.  

ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಬಹಳ ದೊಡ್ಡ ದುರಂತವಾಗಿದೆ. ಇನ್ನೂ ಈ ಅಕ್ರಮದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ನವರ ಕೈವಾಡವಿದೆ ಎಂದು ಆರೋಪ ಮಾಡಿದರು. 

ಇನ್ನೂ ಅಕ್ರಮ ಸಂಬಂಧ ಯಾಕೆ ಇನ್ನೂ ಒಬ್ಬರೂ ರಾಜೀನಾಮೆ ಕೊಡ್ತಿಲ್ಲ? ಹಗಲಿರುಳು ಓದಿದ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಪ್ರಶ್ನೆ ಮಾಡಿದರು. ಈ ಸಂಬಂಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. 

ಝೆನ್‌-ಝೀ ಅಂತಾ ಮೋದಿ ಹೇಳ್ತಾರೆ, ‌ಪರೀಕ್ಷೆ ಮೇಲೆ ಚರ್ಚೆ, ‌ನೀಟ್ ಬಗ್ಗೆ ಪ್ರಧಾನಿ ಮೋದಿ ಯಾವಾಗ ಚರ್ಚೆ ಮಾಡುತ್ತಾರೆ ಎಂದು ಪ್ರಶ್ನೆ ಮಾಡಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ