Webdunia - Bharat's app for daily news and videos

Install App

ಬಾಯಿಗೆ ಬಂದ ಹಾಗೆ ಮಾತನಾಡಲು ಇದು ಆರ್ ಎಸ್ಎಸ್ ಕಚೇರಿಯಲ್ಲ: ಪ್ರಿಯಾಂಕ್ ಖರ್ಗೆ

Krishnaveni K
ಸೋಮವಾರ, 17 ಮಾರ್ಚ್ 2025 (19:51 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಅಂಬೇಡ್ಕರ್ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ಸದಸ್ಯರು ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸಿದರು. ಈ ವೇಳೆ ಪ್ರಿಯಾಂಕ್ ಖರ್ಗೆ ಬಾಯಿಗೆ ಬಂದ ಹಾಗೆ ಮಾತನಾಡಲು ಇದು ಆರ್ ಎಸ್ಎಸ್ ಕಚೇರಿಯಲ್ಲ ಎಂದರು.

ಅಂಬೇಡ್ಕರ್ ರನ್ನು ಸೋಲಿಸಿದ್ದು, ಅವರ ಸಮಾಧಿಗೆ ಜಾಗ ಕೊಡದೇ ಅವಮಾನಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ ಸದಸ್ಯರು ಆರೋಪಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪ್ರಿಯಾಂಕ್ ಖರ್ಗೆ ಅಂಬೇಡ್ಕರ್ ರನ್ನು ಸೋಲಿಸಿದ್ದು ಸಾವರ್ಕರ್. ಇದಕ್ಕೆ ದಾಖಲೆಯಿದೆ ಎಂದರು.

ಸ್ವತಃ ಅಂಬೇಡ್ಕರ್ ಪತ್ರದಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಬೇಕಿದ್ದರೆ ನಿಮಗೆ ದಾಖಲೆ ಕೊಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ ಅಂಬೇಡ್ಕರ್ ಬರೆದ ಪತ್ರ ಓದಿದರು. ಈ ವೇಳೆ ಎರಡೂ ಪಕ್ಷಗಳ ಸದಸ್ಯರ ನಡುವೆ ತೀವ್ರ ಗದ್ದಲವೇರ್ಪಟ್ಟಿದೆ.

ಆಗ ಕೆರಳಿದ ಪ್ರಿಯಾಂಕ್ ಖರ್ಗೆ ‘ಇದು ಸದನ. ಏನಂದುಕೊಂಡಿದ್ದೀರಾ, ನಿಮಗೆ ಬಾಯಿಗೆ ಬಂದ ಹಾಗೆ ಮಾತನಾಡಲು ಇದು ಆರ್ ಎಸ್ಎಸ್ ಕಚೇರಿಯಲ್ಲ. ನಿಮ್ಮಂತಹ ಆರ್ ಎಸ್ಎಸ್ ಜನರನ್ನು ಸಾಕಷ್ಟು ನೋಡಿದ್ದೇನೆ. ನಿಮಗೆಷ್ಟು ಅಧಿಕಾರ ಇದ್ಯೋ ನಮಗೂ ಅಷ್ಟೇ ಇದೆ’ ಎಂದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments