Webdunia - Bharat's app for daily news and videos

Install App

ದರ್ಶನ್ ಫೋಟೋ ಕುರಿತ ಪ್ರಲ್ಹಾದ್ ಜೋಶಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Krishnaveni K
ಶನಿವಾರ, 7 ಸೆಪ್ಟಂಬರ್ 2024 (12:10 IST)
ಬೆಂಗಳೂರು: ನಟ ದರ್ಶನ್ ಹೇಳಿಕೆ ವೈರಲ್ ಮಾಡಿದ್ದೇ ರಾಜ್ಯ ಸರ್ಕಾರ ಎಂದು ಆರೋಪ ಮಾಡಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ರಾಜಾತಿಥ್ಯ ಪಡೆಯುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬಗ್ಗೆ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ತನ್ನ ಹಗರಣಗಳಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಈ ಫೋಟೋಗಳನ್ನು ವೈರಲ್ ಮಾಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಮುಡಾ ಹಗರಣ ಭಾರೀ ಸದ್ದು ಮಾಡಿತ್ತು. ಇದರ ನಡುವೆಯೇ ದರ್ಶನ್ ಫೋಟೋ ವೈರಲ್ ಆಗಿದ್ದು ಇದರಿಂದ ಮುಡಾ ಹಗರಣ ವಿಚಾರ ಕೊಂಚ ಮಟ್ಟಿಗೆ ತಣ್ಣಗಾಗಿತ್ತು. ಈ ರೀತಿ ಮಾಡುವ ಉದ್ದೇಶದಿಂದಲೇ ರಾಜ್ಯ ಸರ್ಕಾರವೇ ಫೋಟೋ ವೈರಲ್ ಮಾಡಿದೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದರು.

ಅದಕ್ಕೆ ಇಂದು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವ  ಬದಲು ಜನರ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ ಎಂದಿದ್ದಾರೆ. ಫೋಟೋ ವೈರಲ್ ಆಗಿರುವುದರ ಹಿಂದೆ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments