Webdunia - Bharat's app for daily news and videos

Install App

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Krishnaveni K
ಗುರುವಾರ, 19 ಜೂನ್ 2025 (10:39 IST)
ಬೆಂಗಳೂರು: ನಾನೇನು  ವಿದೇಶಕ್ಕೆ ಆಟ ಆಡಕ್ಕೆ ಹೋಗಿದ್ನಾ, ಅಮೆರಿಕಾಗೆ ಹೋಗಬೇಡಿ ಎಂದರೆ ಅದಕ್ಕೆ ಕಾರಣ ಕೊಡಬೇಕು. ಅದು ಬಿಟ್ಟು ಕಾರಣವಿಲ್ಲದೇ ಹೋಗಬೇಡಿ ಎಂದರೆ ಹೇಗೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರದ  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳ ನಿಯೋಗದೊಂದಿಗೆ ಪ್ಯಾರಿಸ್ ಗೆ ತೆರಳಿದ್ದರು. ಅಲ್ಲಿಂದ ವಿವಿಧ ಶೃಂಗಗಳಲ್ಲಿ ಭಾಗಿಯಾಗಲು ಅಮೆರಿಕಾಗೆ ತೆರಳಲು ಬಯಸಿದ್ದರು. ಆದರೆ ಅಷ್ಟರಲ್ಲಿ ಕೇಂದ್ರ ಸರ್ಕಾರ ಖರ್ಗೆ ಮತ್ತು ಅಧಿಕಾರಿಗಳ ಅಮೆರಿಕಾ ಪ್ರವಾಸಕ್ಕೆ ಕ್ಲಿಯರೆನ್ಸ್ ನೀಡಿಲ್ಲ. ಬಳಿಕ ಅಧಿಕಾರಿಗಳಿಗೆ ಕ್ಲಿಯರೆನ್ಸ್ ನೀಡಿತು. ಆದರೆ ಖರ್ಗೆಗೆ ನೀಡಲಿಲ್ಲ. ಹೀಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಬೆಂಗಳೂರಿಗೆ ಬರುತ್ತಿದ್ದಂತೇ ವಿಮಾನ ನಿಲ್ದಾಣದಲ್ಲೇ ಖರ್ಗೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವೇನು ಆಟ ಆಡಕ್ಕೆ ವಿದೇಶಕ್ಕೆ ಹೋಗುತ್ತಿಲ್ಲ. ಕರ್ನಾಟಕಕ್ಕೆ ಬಂಡವಾಳ ತಂದುಕೊಡುವುದು ನಮ್ಮ ಕರ್ತವ್ಯ. ಕರ್ನಾಟಕಕ್ಕೆ ಒಳ್ಳೆಯದಾದರೆ ದೇಶಕ್ಕೂ ಒಳ್ಳೆಯದು ತಾನೇ.ಕರ್ನಾಟಕ ದೇಶದ ಆರ್ಥಿಕತೆಯ ಎಂಜಿನ್. ಹೀಗಿರುವಾಗ  ವಿನಾಕಾರಣ ನಮ್ಮ ಪ್ರಯಾಣಕ್ಕೆ ಅನುಮತಿ ನಿರಾಕರಿಸುವುದು ಸರಿಯಲ್ಲ.

ಕಳೆದ ಬಾರಿ ಹೋಗಿದ್ದಾಗ ಕರ್ನಾಟಕಕ್ಕೆ ಸಾಕಷ್ಟು ಬಂಡವಾಳ ತಗೊಂಡು ಬಂದಿದ್ವಿ. ತಿರಸ್ಕಾಋ ಮಾಡಲಿ. ಆದರೆ ಅದಕ್ಕೆ ಕಾರಣ ಕೊಡಬೇಕಲ್ವಾ? ಯಾವುದೇ ಯೋಜನೆ ಘೋಷಣೆ ಮಾಡಿದರೂ ಪ್ರಾರಂಭವಾಗೋದು ಕರ್ನಾಟಕದಲ್ಲಿ. ಇಲ್ಲಿ ಬಂಡವಾಳ ಹೂಡಿಕೆಗೆ ಅಷ್ಟು ಅವಕಾಶಗಳಿವೆ. ಹಾಗಿದ್ದಾಗ ತಿರಸ್ಕಾರ ಮಾಡುವುದು ಎಷ್ಟು ಸರಿ ಎಂದು ಖರ್ಗೆ ಕಿಡಿ ಕಾರಿದ್ದಾರೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಬಳಿಕ ಮಾಧ್ಯಮ ಗೋಷ್ಠಿ ನಡೆಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

ಮುಂದಿನ ಸುದ್ದಿ
Show comments