Webdunia - Bharat's app for daily news and videos

Install App

ವಿಜಯೇಂದ್ರಗೂ ಏನೋ ದುಬೈ ನಂಟಿದ್ಯಂತಪ್ಪಾ... ಪ್ರಿಯಾಂಕ್ ಖರ್ಗೆ

Krishnaveni K
ಮಂಗಳವಾರ, 11 ಮಾರ್ಚ್ 2025 (11:35 IST)
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ಆರೋಪಿ ರನ್ಯಾ ರಾವ್ ಜೊತೆ ಕಾಂಗ್ರೆಸ್ ಸರ್ಕಾರದ ಇಬ್ಬರು ಸಚಿವರಿಗೆ ನಂಟಿದೆ ಎಂಬ ಬಿಜೆಪಿ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯೇಂದ್ರಗೂ ಏನೋ ದುಬೈ ನಂಟಿದ್ಯಂತಲ್ಲಪ್ಪಾ ಎಂದು ಟಾಂಗ್ ಕೊಟ್ಟಿದ್ದಾರೆ.

ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಮಾಡುತ್ತಿದ್ದ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಬಂಧನದ ವೇಳೆ ಸಚಿವರೊಬ್ಬರಿಗೆ ಕರೆ ಮಾಡಲು ಯತ್ನಿಸಿದ್ದಳು ಎಂಬ ಮಾಹಿತಿಯಿದೆ. ಈ ಕಾರಣಕ್ಕೆ ಆಕೆಗೆ ಹಾಲಿ ಸರ್ಕಾರದ ಸಚಿವರ ಜೊತೆಗೆ ನಂಟಿದೆ ಎಂದು ಬಿಜೆಪಿ ಬಲವಾದ ಆರೋಪ ಮಾಡಿದೆ.

ಇದರ ಬಗ್ಗೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ. ಇದಕ್ಕೆ ಇಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ವಿಜಯೇಂದ್ರಗೂ ಏನೋ ದುಬೈ ನಂಟಿದ್ಯಂತಲ್ಲಾ ಎಂದು ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿಯವರು ಸುಮ್ಮನೇ ಆರೋಪ ಮಾಡುವುದಲ್ಲ. ಒಂದು ವೇಳೆ ನಮ್ಮ ಸಚಿವರ ಜೊತೆ ನಂಟಿದ್ದರೆ ಅದಕ್ಕೆ ದಾಖಲೆ ಕೊಡಲಿ. ಪೊಲೀಸರು, ಇಲ್ಲವೇ ಅವರದ್ದೇ ತನಿಖಾ ಸಂಸ್ಥೆ ಸಿಬಿಐ ಇದ್ಯಲ್ವಾ? ತನಿಖೆ ಮಾಡಿದರೆ ಸತ್ಯ ಗೊತ್ತಾಗುತ್ತದೆ. ಅದು ಬಿಟ್ಟು ಸುಮ್ಮನೇ ಆರೋಪ ಮಾಡುವುದಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments