Webdunia - Bharat's app for daily news and videos

Install App

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

Krishnaveni K
ಗುರುವಾರ, 13 ನವೆಂಬರ್ 2025 (17:45 IST)
ಕಲಬುರಗಿ: ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಸಂಘಕ್ಕೆ ಈಗ ಸಂವಿಧಾನದ ಮಹತ್ವ ಅರಿವಾಗಿರಬಹುದು ಎಂದಿದ್ದಾರೆ.

ನವಂಬರ್ 16 ರಂದು ಷರತ್ತುಗಳೊಂದಿಗೆ ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!

ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ.

300 ಜನರು ಮಾತ್ರ ಭಾಗವಹಿಸಬೇಕು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ, ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ, ಮತ್ತು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ.

ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು’ ಎಂದು ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments