Publish Date: Thu, 11 Oct 2018 (19:35 IST)
Updated Date: Thu, 11 Oct 2018 (19:39 IST)
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿ ಅಫಜಲಪುರಕ್ಕೆ ಆಗಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಅದ್ಧೂರಿ ಸನ್ಮಾನ ದೊರಕಿದೆ. ಅಂದಹಾಗೆ ಬಿಜೆಪಿ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸ್ಪರ್ಧಿಸುತ್ತಿದ್ದ ಕ್ಷೇತ್ರ ಇದಾಗಿದೆ.
ಅಫಜಲಪುರದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ರೇಷ್ಮೆ ಪೇಟಾ ತೊಡಿಸಿ, ಬೃಹತ್ ಹಾರ ಹಾಕಿ ಸಚಿವ ಪ್ರಿಯಾಂಕ್ ಖರ್ಗೆಗೆ ಅದ್ಧೂರಿ ಸನ್ಮಾನ ಮಾಡಲಾಯಿತು.
ಅಫಜಲಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಲಬುರಗಿ ಜಿಲ್ಲೆ ಅಫಜಲಪುರದ ನ್ಯಾಷನಲ್ ಫಂಕ್ಷನ್ ಹಾಲ್ ಬಳಿ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ ಸಚಿವ ಪ್ರಿಯಾಂಕ್ ಖರ್ಗೆಗೆ ಸನ್ಮಾನ ಮಾಡಿದ ಹಲವು ಸ್ಥಳೀಯ ಮುಖಂಡರು ಜೈಕಾರ ಕೂಗಿದರು.
ಸ್ಥಳೀಯ ಕಾಂಗ್ರೆಸ್ ಮುಖಂಡರಿಂದ ಬೆಳ್ಳಿ ಬುದ್ಧನ ಮೂರ್ತಿ, ಒಂದು ಬೆಳ್ಳಿ ಕಿರೀಟ, ನಾಲ್ಕು ಬೆಳ್ಳಿ ಖಡ್ಗಗಳ ಉಡುಗೊರೆ ನೀಡಲಾಯಿತು.