Webdunia - Bharat's app for daily news and videos

Install App

ನಾಳೆ ರಾಜ್ಯದಲ್ಲಿ ಪ್ರಿಯಾಂಕಾ ಕಮಾಲ್​​​

Webdunia
ಸೋಮವಾರ, 24 ಏಪ್ರಿಲ್ 2023 (18:20 IST)
ಕೇಂದ್ರ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದು, ಬಿಜೆಪಿ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ.. ಅಂತೆಯೇ ಕಾಂಗ್ರೆಸ್​ ನಾಯಕರು ಸಹ ಆಗಮಿಸುತ್ತಿದ್ದು, ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕೂಡಲಸಂಗಮಕ್ಕೆ ಭೇಟಿ ನೀಡಿದ್ರು.. ಈ ಮೂಲಕ ಲಿಂಗಾಯತ ಮತ ಬುಟ್ಟಿಗೆ ಕೈ ಹಾಕಿದ್ರು. ಇದೀಗ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.. 12.30ಕ್ಕೆ ಹೆಳವರಹುಂಡಿ, ಟಿ.ನರಸೀಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ, ನಂತರ ಹನೂರಿನಲ್ಲಿ ನಡೆಯಲಿರುವ ಮಹಿಳಾ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.. ಸಂಜೆ 5 ಗಂಟೆಗೆ ಕೆ.ಆರ್.ನಗರಕ್ಕೆ ಪ್ರಿಯಾಂಕಾ ಆಗಮಿಸಲಿದ್ದು, 5.30 ರಿಂದ 6.30ರವರೆಗೆ ಕೆ.ಆರ್.ನಗರದಲ್ಲಿ ಪ್ರಿಯಾಂಕಾ ರೋಡ್ ಶೋ ನಡೆಸಲಿದ್ದಾರೆ.. ತೋಪಮ್ಮನ ದೇವಸ್ಥಾನ, ಅಂಬೇಡ್ಕರ್ ಪುತ್ಥಳಿ ಮಾರ್ಗದಿಂದ ಮುನ್ಸಿಪಾಲಿಟಿ ಆಫೀಸ್ ಸರ್ಕಲ್​ವರೆಗೆ ಸುಮಾರು 2 ಕಿಲೋಮೀಟರ್​ ಶೋ ನಡೆಸಲಿರುವ ಅವರು, ರೋಡ್​ ಶೋ ಬಳಿಕ ಸಂಜೆ ಮೈಸೂರಿಗೆ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments