ನೈತಿಕತೆ ಎಲ್ಲಾ ನಮಗೆ ಮಾತ್ರ ಇರಬೇಕಾ: ಪ್ರಿಯಾಂಕ್ ಖರ್ಗೆ

Krishnaveni K
ಬುಧವಾರ, 28 ಆಗಸ್ಟ್ 2024 (16:10 IST)
Photo Credit: Facebook
ಬೆಂಗಳೂರು: ನೈತಿಕತೆ ಎನ್ನುವುದು ಕೇವಲ ಕಾಂಗ್ರೆಸ್ ನವರಿಗೆ ಮಾತ್ರನಾ? ಬಿಜೆಪಿವಯರಿಗೆ ಇರಬಾರದಾ, ನಮಗೆ ಮಾತ್ರ ಇರಬೇಕಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಸಿಎ ಕೋಟಾದಡಿ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ ಗೆ ನಿವೇಶನ ಮಂಜೂರು ಮಾಡಿರುವುದರ ವಿರುದ್ಧ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದ್ದು, ಪ್ರಿಯಾಂಕ್ ರಾಜೀನಾಮೆಗೆ ಒತ್ತಾಯಿಸಿದೆ. ಖರ್ಗೆ ಕುಟುಂಬಕ್ಕಾಗಿ ನಿಯಮಾವಳಿಯನ್ನೇ ಬದಲಾಯಿಸಿ 5 ಎಕರೆ ಜಮೀನು ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ದಲಿತ ಎಂಬ ಹೆಸರಿನಲ್ಲಿ ಸರ್ಕಾರದ ಪ್ರಭಾವ ಬಳಸಿಕೊಂಡು ಖರ್ಗೆ ಕುಟುಂಬ ಜಮೀನು ಪಡೆದುಕೊಂಡಿದೆ. ಹೀಗಾಗಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ ನಾನ್ಯಾಕೆ ರಾಜೀನಾಮೆ ಕೊಡಲಿ, ನಾನೇನೂ ತಪ್ಪು ಮಾಡಿಲ್ಲ ಎಂದಿದ್ದಾರೆ.

ಬಿಜೆಪಿಯವರ ಮೇಲೂ ಹಲವು ಕೇಸ್ ಗಳಿವೆ. ಬಿಎಸ್ ಯಡಿಯೂರಪ್ಪನವರ ವಿರುದ್ಧವೂ ಕೇಸ್ ಇಲ್ವಾ? ಅವರಿಗೆ ನೈತಿಕತೆ ಅಪ್ಲೈ ಆಗಲ್ವಾ? ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಪ್ರಿಯಾಂಕ್ ಖರ್ಗೆ ತಮ್ಮ ವಿರುದ್ಧ ಹೋರಾಡುತ್ತಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments