Webdunia - Bharat's app for daily news and videos

Install App

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದಳು: ಮೋದಿ ವಿರುದ್ಧ ಪ್ರಿಯಾಂಕ ವಾದ್ರಾ ಗುಡುಗು

Krishnaveni K
ಬುಧವಾರ, 24 ಏಪ್ರಿಲ್ 2024 (09:44 IST)
ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಾಂಗಲ್ಯಕ್ಕೆ ಕುತ್ತಾಗುಲಿದೆ ಎಂಬ ಹೇಳಿಕೆ ನೀಡಿದ್ದಕ್ಕೆ ಪ್ರಿಯಾಂಕಾ ವಾದ್ರಾ ತಿರುಗೇಟು ನೀಡಿದ್ದಾರೆ.

ರಾಜಸ್ಥಾನದ ಚುನಾವಣಾ ಪ್ರಚಾರ ವೇಳೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಾಂಗಲ್ಯವನ್ನೂ ಕಿತ್ತುಕೊಳ್ಳುತ್ತದೆ. ನಿಮ್ಮ ಆಸ್ತಿ, ಚಿನ್ನವನ್ನು ಕಿತ್ತುಕೊಂಡು ಈ ದೇಶದಲ್ಲಿ ಹೆಚ್ಚು ಮಕ್ಕಳಿರುವ ಸಮುದಾಯದವರಿಗೆ ಹಂಚುತ್ತದೆ ಎಂದು ಪರೋಕ್ಷವಾಗಿ ಮುಸ್ಲಿಮರ ಓಲೈಕೆ ಮಾಡುವ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದರು.

ಇದಕ್ಕೆ ಬೆಂಗಳೂರಿನಲ್ಲಿ ಪ್ರಿಯಾಂಕ ವಾದ್ರಾ ತಿರುಗೇಟು ನೀಡಿದ್ದಾರೆ. ‘ಎಷ್ಟು ಹಸಿ ಹಸಿ ಸುಳ್ಳು ಹೇಳುತ್ತಾರೆ. ಇತ್ತೀಚೆಗೆ ನಾವು ಮಹಿಳೆಯರ ಮಾಂಗಲ್ಯ ಕಿತ್ತುಕೊಳ್ಳುತ್ತೇವೆ, ಆಸ್ತಿ ಕಿತ್ತುಕೊಳ‍್ಳುತ್ತೇವೆ ಎಂದು ಸುಳ್ಳು ಹೇಳಿದ್ದಾರೆ. ನಾವು 70 ವರ್ಷ ಅಧಿಕಾರದಲ್ಲಿದ್ದೆವು. ಒಮ್ಮೆಯಾದರೂ ಕಾಂಗ್ರೆಸ್ ನಿಮ್ಮ ಮಾಂಗಲ್ಯಕ್ಕೆ ಕೈ ಹಾಕಿದೆಯಾ? ನಿಮ್ಮ ಆಸ್ತಿಯನ್ನು ಕಿತ್ತುಕೊಂಡಿದ್ದೇವಾ? ದೇಶಕ್ಕೆ ಅಗತ್ಯ ಬಂದಾಗ ಇಂದಿರಾ ಗಾಂಧಿಯವರು ತಮ್ಮ ಸ್ವಂತ ಚಿನ್ನವನ್ನು ನೀಡಿದರು. ನನ್ನ ತಾಯಿ ಈ ದೇಶಕ್ಕಾಗಿ ತಮ್ಮ ಮಾಂಗಲ್ಯವನ್ನೇ ಬಲಿದಾನ ಮಾಡಿದರು. ಗೊತ್ತಿಲ್ಲದೇ ಏನೇನೋ ಮಾತನಾಡಬಾರದು’ ಎಂದು ಪ್ರಿಯಾಂಕ ಆಕ್ರೋಶ ಹೊರಹಾಕಿದ್ದಾರೆ.

ಪ್ರಧಾನಿ ಮೋದಿ ನಿಜವಾಗಿಯೂ ಸಮುದಾಯವನ್ನು ಒಡೆಯುವ ಕೆಲಸ ಮಾಡುವವರಲ್ಲ ಎಂದರೆ, ಈಗ ಚುನಾವಣೆ ಸಮಯದಲ್ಲಿ ಇಂತಹ ಹೇಳಿಕೆ ನೀಡಿರುವುದು ಯಾಕೆ ಎಂದು ಪ್ರಿಯಾಂಕ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments