Webdunia - Bharat's app for daily news and videos

Install App

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದಳು: ಮೋದಿ ವಿರುದ್ಧ ಪ್ರಿಯಾಂಕ ವಾದ್ರಾ ಗುಡುಗು

Krishnaveni K
ಬುಧವಾರ, 24 ಏಪ್ರಿಲ್ 2024 (09:44 IST)
ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಾಂಗಲ್ಯಕ್ಕೆ ಕುತ್ತಾಗುಲಿದೆ ಎಂಬ ಹೇಳಿಕೆ ನೀಡಿದ್ದಕ್ಕೆ ಪ್ರಿಯಾಂಕಾ ವಾದ್ರಾ ತಿರುಗೇಟು ನೀಡಿದ್ದಾರೆ.

ರಾಜಸ್ಥಾನದ ಚುನಾವಣಾ ಪ್ರಚಾರ ವೇಳೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಾಂಗಲ್ಯವನ್ನೂ ಕಿತ್ತುಕೊಳ್ಳುತ್ತದೆ. ನಿಮ್ಮ ಆಸ್ತಿ, ಚಿನ್ನವನ್ನು ಕಿತ್ತುಕೊಂಡು ಈ ದೇಶದಲ್ಲಿ ಹೆಚ್ಚು ಮಕ್ಕಳಿರುವ ಸಮುದಾಯದವರಿಗೆ ಹಂಚುತ್ತದೆ ಎಂದು ಪರೋಕ್ಷವಾಗಿ ಮುಸ್ಲಿಮರ ಓಲೈಕೆ ಮಾಡುವ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದರು.

ಇದಕ್ಕೆ ಬೆಂಗಳೂರಿನಲ್ಲಿ ಪ್ರಿಯಾಂಕ ವಾದ್ರಾ ತಿರುಗೇಟು ನೀಡಿದ್ದಾರೆ. ‘ಎಷ್ಟು ಹಸಿ ಹಸಿ ಸುಳ್ಳು ಹೇಳುತ್ತಾರೆ. ಇತ್ತೀಚೆಗೆ ನಾವು ಮಹಿಳೆಯರ ಮಾಂಗಲ್ಯ ಕಿತ್ತುಕೊಳ್ಳುತ್ತೇವೆ, ಆಸ್ತಿ ಕಿತ್ತುಕೊಳ‍್ಳುತ್ತೇವೆ ಎಂದು ಸುಳ್ಳು ಹೇಳಿದ್ದಾರೆ. ನಾವು 70 ವರ್ಷ ಅಧಿಕಾರದಲ್ಲಿದ್ದೆವು. ಒಮ್ಮೆಯಾದರೂ ಕಾಂಗ್ರೆಸ್ ನಿಮ್ಮ ಮಾಂಗಲ್ಯಕ್ಕೆ ಕೈ ಹಾಕಿದೆಯಾ? ನಿಮ್ಮ ಆಸ್ತಿಯನ್ನು ಕಿತ್ತುಕೊಂಡಿದ್ದೇವಾ? ದೇಶಕ್ಕೆ ಅಗತ್ಯ ಬಂದಾಗ ಇಂದಿರಾ ಗಾಂಧಿಯವರು ತಮ್ಮ ಸ್ವಂತ ಚಿನ್ನವನ್ನು ನೀಡಿದರು. ನನ್ನ ತಾಯಿ ಈ ದೇಶಕ್ಕಾಗಿ ತಮ್ಮ ಮಾಂಗಲ್ಯವನ್ನೇ ಬಲಿದಾನ ಮಾಡಿದರು. ಗೊತ್ತಿಲ್ಲದೇ ಏನೇನೋ ಮಾತನಾಡಬಾರದು’ ಎಂದು ಪ್ರಿಯಾಂಕ ಆಕ್ರೋಶ ಹೊರಹಾಕಿದ್ದಾರೆ.

ಪ್ರಧಾನಿ ಮೋದಿ ನಿಜವಾಗಿಯೂ ಸಮುದಾಯವನ್ನು ಒಡೆಯುವ ಕೆಲಸ ಮಾಡುವವರಲ್ಲ ಎಂದರೆ, ಈಗ ಚುನಾವಣೆ ಸಮಯದಲ್ಲಿ ಇಂತಹ ಹೇಳಿಕೆ ನೀಡಿರುವುದು ಯಾಕೆ ಎಂದು ಪ್ರಿಯಾಂಕ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments