Webdunia - Bharat's app for daily news and videos

Install App

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ: ಎನ್‌ಐಎ ತನಿಖೆಗೆ ಆರ್‌ ಅಶೋಕ್ ಒತ್ತಾಯ

Sampriya
ಸೋಮವಾರ, 16 ಸೆಪ್ಟಂಬರ್ 2024 (15:13 IST)
Photo Courtesy X
ಬೆಂಗಳೂರು: ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆರೋಪಿಸುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ,   ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ.


ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ.

ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್
 ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರ್ ಅಶೋಕ್ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments