ರಾಜ್ಯ ಪರಿವರ್ತನಾ ಸಂಸ್ಥೆ ಉಪಾಧ್ಯಕ್ಷರಾಗಿ ಪ್ರೋ.ರಾಜೀವ್ ಗೌಡ ನೇಮಕ

Webdunia
ಮಂಗಳವಾರ, 15 ಆಗಸ್ಟ್ 2023 (19:50 IST)
ಬೆಂಗಳೂರು : ಪ್ರೋ.ಎಂ.ವಿ ರಾಜೀವ್ ಗೌಡ ಅವರನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ ರಾಜ್ಯ ಯೋಜನಾ ಮಂಡಳಿ ಎಂಬ ಹೆಸರಿನಲ್ಲಿ ಅಸ್ತಿತ್ವದಲ್ಲಿದ್ದ ಸಂಸ್ಥೆಗೆ ಈಗ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮರು ನಾಮಕರಣ ಮಾಡಲಾಗಿದೆ. ಇದು ಕರ್ನಾಟಕದ ಪಾಲಿಗೆ ನೀತಿ ಆಯೋಗದ ಹೊಣೆಗಾರಿಕೆಗೆ ಸಮಾನವಾಗಿದೆ. ರಾಜೀವ್ ಗೌಡ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಈ ಜವಬ್ದಾರಿ ವಹಿಸಲಾಗಿದೆ.

ಪ್ರೋ.ರಾಜೀವ್ ಗೌಡ ಅವರು 2014- 20ರ ವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. ಅಲ್ಲದೇ ಎಐಸಿಸಿಯ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿಯೂ ಆಗಿದ್ದರು. ಜೊತೆಗೆ ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಅವರು ಬೆಂಗಳೂರಿನ ಐಐಎಂನಲ್ಲಿ ಅರ್ಥಶಾಸ್ತ್ರ ಹಾಗೂ ಸಮಾಜ ವಿಜ್ಞಾನದ ಪ್ರೊಫೆಸರ್ ಆಗಿ ಕೆಲಸ ಮಾಡಿದ್ದಾರೆ. ಅಲ್ಲದೇ ಆರ್ಬಿಐನ ಕೇಂದ್ರ ಮಂಡಳಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಸರ್ಕಾರಕ್ಕೆ ಶಿಫಾರಸು ಮಾಡುವುದು, ನೂತನ ಪರಿಹಾರ ಮಾರ್ಗಗಳನ್ನು ಸರ್ಕಾರಕ್ಕೆ ಸೂಚಿಸುವುದು ಎಸ್ಐಟಿಕೆಯ ಕಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಮುಂದಿನ ಸುದ್ದಿ
Show comments