Webdunia - Bharat's app for daily news and videos

Install App

ಪ್ರಾಧ್ಯಾಪಕರಿಂದ ಸಾರ್ವಜನಿಕ ನಿಂದನೆ: ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ

Webdunia
ಶನಿವಾರ, 19 ನವೆಂಬರ್ 2016 (18:18 IST)
ಪ್ರಾಧ್ಯಾಪಕರೊಬ್ಬರು ಸಾರ್ವಜನಿಕವಾಗಿ ತಮ್ಮನ್ನು ನಿಂದಿಸಿದರು ಎಂದು ಆರೋಪಿಸಿ ಬೆಂಗಳೂರು ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 
 
ಬಿಎಂಸಿಆರ್‌ಐನಲ್ಲಿ ಉಪನ್ಯಾಸಕಿಯಾಗಿದ್ದ ಡಾ.ಮಮತಾ ಎಂಬುವವರು ನವೆಂಬರ್ 17 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ, ವಿದ್ಯಾರ್ಥಿಗಳು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. 
 
ಆತ್ಮಹತ್ಯೆಗೆ ಯತ್ನಿಸಿರುವ ಉಪನ್ಯಾಸಕಿ ಡಾ.ಮಮತಾ ಅವರು ಬಿಎಂಸಿಆರ್‌ಐ ನಿರ್ದೇಶಕ ಡಾ. ಪಿ.ಕೆ.ದೇವದಾಸ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಹಿರಿಯ ಪ್ರಾಧ್ಯಾಪಕಿ ಡಾ.ಹೇಮಾವತಿ ಅವರು ಬಹಿರಂಗವಾಗಿ ತಮ್ಮನ್ನು ನಿಂದಿಸಿರುವುದಾಗಿ ದೂರಿದ್ದಾರೆ. ಈ ಕುರಿತು ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. 
 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ. ಪಿ.ಕೆ.ದೇವದಾಸ್ ಅವರು, ಹೇಮಾವತಿ ಹಾಗೂ ಮಮತಾ ಇಬ್ಬರು ಉಪನ್ಯಾಸಕರಾದ್ದು, ಹಲವು ದಿನಗಳಿಂದ ಅವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು. ಆದರೆ, ಮಮತಾ ಅವರು ಆತ್ಮಹತ್ಯೆಗೆ ಯತ್ನಿಸುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತು ಆಪ್ತ ಸಮಾಲೋಚನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments