Webdunia - Bharat's app for daily news and videos

Install App

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ರಿಂದ ಪ್ರಗತಿ ಪರಿಶೀಲನೆ

Webdunia
ಶುಕ್ರವಾರ, 3 ಜೂನ್ 2022 (19:20 IST)
ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು. ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಯಲಹಂಕ ಕೆರೆಯು 292 ಎಕರೆ ಪ್ರದೇಶದಲ್ಲಿದ್ದು, ಕೆರೆಯಲ್ಲಿ ಹೂಳನ್ನು ತೆರವುಗೊಳಿಸಿ, ಬಂಡ್, ಜೌಗು ಪ್ರದೇಶ, ಇನ್ಲೆಟ್-ಔಟ್ಲೆಟ್, ಕೆರೆಗೆ ಕೊಳಚೆ ನೀರು ಸೇರದಿರುವ ಹಾಗೆ ತಿರುವುಗಾಲುವೆ ನಿರ್ಮಾಣ, ಭದ್ರತಾ ಸಿಬ್ಬಂದಿಯ ಕೊಠಡಿ, ಸೈಕಲ್ ಟ್ರ್ಯಾಕ್, ವಿಹಾರಕ್ಕೆ ಬರುವವರಿಗೆ ವಿರಾಮದ ಸ್ಥಳ ಹಾಗೂ ಕೆರೆಯ ಸುತ್ತಲು ಫೆನ್ಸಿಂಗ್ ಅಳವಡಿಕೆ ಮಾಡಲಾಗಿದೆ. ಮಳೆಗಾಲದ ವೇಳೆ ಸ್ಥಳೀಯ ಪ್ರದೇಶದಲ್ಲಿ ಜಾಲಾವೃತವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರಾಜಕಾಲುವೆಗಳ ದುರಸ್ಥಿ ಕಾರ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್, ಡಾ. ಬಿ.ಆರ್.ಅಂಬೇಡ್ಕರ್ ಭವನ, ಸೈಕಲ್ ಟ್ರ್ಯಾಕ್ ಹಾಗೂ ವೈಟ್ ಟಾಪಿಂಗ್ ಕಾಮಗಾರಿ, ಅಟ್ಟೂರು ಕೆರೆ, ಅಟ್ಟೂರು ಸಸ್ಯಕ್ಷೇತ್ರ, ಜಕ್ಕೂರು ರಸ್ತೆ ಅಗಲೀಕರಣ ಕಾಮಗಾರಿ, ಜೆ.ಎನ್.ಸಿ.ಎ.ಎಸ್.ಆರ್, ಡಾಂಬರು ಮಿಶ್ರಣ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments