ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ರಿಂದ ಪ್ರಗತಿ ಪರಿಶೀಲನೆ

Webdunia
ಶುಕ್ರವಾರ, 3 ಜೂನ್ 2022 (19:20 IST)
ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು. ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಯಲಹಂಕ ಕೆರೆಯು 292 ಎಕರೆ ಪ್ರದೇಶದಲ್ಲಿದ್ದು, ಕೆರೆಯಲ್ಲಿ ಹೂಳನ್ನು ತೆರವುಗೊಳಿಸಿ, ಬಂಡ್, ಜೌಗು ಪ್ರದೇಶ, ಇನ್ಲೆಟ್-ಔಟ್ಲೆಟ್, ಕೆರೆಗೆ ಕೊಳಚೆ ನೀರು ಸೇರದಿರುವ ಹಾಗೆ ತಿರುವುಗಾಲುವೆ ನಿರ್ಮಾಣ, ಭದ್ರತಾ ಸಿಬ್ಬಂದಿಯ ಕೊಠಡಿ, ಸೈಕಲ್ ಟ್ರ್ಯಾಕ್, ವಿಹಾರಕ್ಕೆ ಬರುವವರಿಗೆ ವಿರಾಮದ ಸ್ಥಳ ಹಾಗೂ ಕೆರೆಯ ಸುತ್ತಲು ಫೆನ್ಸಿಂಗ್ ಅಳವಡಿಕೆ ಮಾಡಲಾಗಿದೆ. ಮಳೆಗಾಲದ ವೇಳೆ ಸ್ಥಳೀಯ ಪ್ರದೇಶದಲ್ಲಿ ಜಾಲಾವೃತವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರಾಜಕಾಲುವೆಗಳ ದುರಸ್ಥಿ ಕಾರ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್, ಡಾ. ಬಿ.ಆರ್.ಅಂಬೇಡ್ಕರ್ ಭವನ, ಸೈಕಲ್ ಟ್ರ್ಯಾಕ್ ಹಾಗೂ ವೈಟ್ ಟಾಪಿಂಗ್ ಕಾಮಗಾರಿ, ಅಟ್ಟೂರು ಕೆರೆ, ಅಟ್ಟೂರು ಸಸ್ಯಕ್ಷೇತ್ರ, ಜಕ್ಕೂರು ರಸ್ತೆ ಅಗಲೀಕರಣ ಕಾಮಗಾರಿ, ಜೆ.ಎನ್.ಸಿ.ಎ.ಎಸ್.ಆರ್, ಡಾಂಬರು ಮಿಶ್ರಣ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments