Webdunia - Bharat's app for daily news and videos

Install App

ಸರಣಿ ಸ್ಪೋಟಕ ಪಟಾಕಿ ನಿಷೇಧಿಸಿ: ಡಿಸಿ ಸೂಚನೆ

Webdunia
ಭಾನುವಾರ, 4 ನವೆಂಬರ್ 2018 (18:18 IST)
ಭಾರತದ ಸರ್ವೋಚ್ಛ ನ್ಯಾಯಾಲಯವು ಸಿವಿಲ್ ಪಿಟಿಷನ್ ಸಂ.728/2015ರಲ್ಲಿ ಕಳೆದ ಅಕ್ಟೋಬರ್ 23, 30 ಹಾಗೂ 31ರಂದು ನೀಡಿದ ತೀರ್ಪಿನನ್ವಯ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿತದಿಂದ ಉಂಟಾಗುವ ಘನತ್ಯಾಜ್ಯ ವಸ್ತುಗಳ ಮಾಲಿನ್ಯ ತಡೆಯಲು ಸರಣಿ ಸ್ಪೋಟಕ ಪಟಾಕಿಗಳು  ತಯ್ಯಾರಿಸುವುದು, ಮಾರಾಟ ಮತ್ತು ಬಳಸುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂತಹ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.


ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಈ ವಿಷಯ ತಿಳಿಸಿದ್ದು, ದೀಪವಾಳಿ ಹಬ್ಬದ ಸಂಬಂಧ 2018ರ ನವೆಂಬರ್-5 ನವೆಂಬರ್-6, ನವೆಂಬರ್-7(ದೀಪಾವಳಿ ಅಮಾವಾಸ್ಯೆ) ಹಾಗೂ ನವೆಂಬರ್-8(ಬಲಿಪಾಡ್ಯಮಿ) ದಿನಗಳಂದು ರಾತ್ರಿ 8 ಗಂಟೆಯಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ನಿಗಧಿತ ಸಮಯದಲ್ಲಿ ಮಾತ್ರ ಪಟಾಕಿ ಸಿಡಿತ ಪ್ರಕ್ರಿಯೆ ನಡೆಯುವಂತೆ ಹಾಗೂ ನಿಷೇಧಿತ ಪಟಾಕಿ ಮಾರಾಟವನ್ನು ತಡೆಗಟ್ಟುವುದು ಪೋಲಿಸ್ ಇಲಾಖೆಯ ಜವಾಬ್ದಾರಿಯಾಗಿದ್ದು, ತಪ್ಪಿದಲ್ಲಿ ಸಂಬಂಧಿಸಿದ ಠಾಣಾಧಿಕಾರಿಗಳನ್ನು ನ್ಯಾಯಾಲಯದ ಉಲ್ಲಂಘನೆಗಾಗಿ ತಪ್ಪಿಸ್ಥರೆಂದು ನಿರ್ಧರಿಸಿ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅನಧಿಕೃತ ಮಾರಾಟ ಮಾಡಿದಲ್ಲಿ ಕಠಿಣ ಕ್ರಮ: ನಿಷೇಧಿತ ಪಟಾಕಿ ಹೊರತುಪಡಿಸಿ ಇನ್ನುಳಿದ ಸ್ಪೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಿಗೆ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡಬೇಕು. ಪರವಾನಿಗೆ ಹೊಂದದ ಮಾರಾಟಗಾರರು ಪಟಾಕಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments