Webdunia - Bharat's app for daily news and videos

Install App

ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ!

Webdunia
ಶುಕ್ರವಾರ, 12 ಆಗಸ್ಟ್ 2022 (11:32 IST)
ಕೊಪ್ಪಳ : ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.

ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 

ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ ಆಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಸಿಸಿ ಕ್ಯಾಮೆರಾ ಆಧರಿಸಿ ಈ ಸಂಬಂಧ ಕನಕಗಿರಿ ಠಾಣೆಯಲ್ಲಿ 58 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಖಾದರಭಾಷಾ ಹಾಗೂ ಹಂಪಮ್ಮ ದೂರು ಪ್ರತಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments