Webdunia - Bharat's app for daily news and videos

Install App

ಅಧಿಕಾರಿಗಳಿಗೆ ಖಡಕ್ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 16 ಮೇ 2016 (14:45 IST)
ನಿಗದಿತ ಸಮಯದಲ್ಲಿ ಯೋಜನೆಗಳು ಪೂರ್ಣಗೊಳಿಸುವಂತೆ ಆಯಾ ಇಲಾಖೆಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 
ಪ್ರಗತಿ ಪರಿಶೀಲನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಗದಿಪಡಿಸಿರುವ ಕಾಲ ಮೀತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಆದೇಶ ನೀಡಿದ್ದು, ಕಡತಗಳ ವಿಲೇವಾರಿಯಲ್ಲಿ ವಿಳಂಬವಾದರೆ ಆಯಾ ಇಲಾಖೆಯ ಕಾರ್ಯದರ್ಶಿಗಳ ಹೊಣೆ ಎಂದು ಖಡಕ್ ಆದೇಶ ನೀಡಿದ್ದಾರೆ.
 
2013-14 ರ ಆರ್ಥಿಕ ವರ್ಷದಲ್ಲಿ ಯೋಜನೆಗಳು 99 ಪ್ರತಿಶತ ಪ್ರಗತಿ ಕಂಡಿದ್ದು, 2014-15 ರ ಸಾಲಿನಲ್ಲಿ 94 ಪ್ರತಿಶತ ಮತ್ತು 2015-16 ಸಾಲಿನಲ್ಲಿ 95.5 ಪ್ರತಿಶತ ಪ್ರಗತಿ ಕಂಡಿದೆ. 2013-14 ರ ಸಾಲಿಗೆ ಹೋಲಿಸಿದರೆ ಯೋಜನೆಗಳ ಪ್ರಗತಿಯಲ್ಲಿ 3.5 ಪ್ರತಿಶತ ಕುಂಠಿತಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡರು.
 
ಸ್ವಚ್ಚ ಭಾರತ ಯೋಜನೆಯ ಪ್ರಗತಿಯಲ್ಲೂ ಕುಂಠಿತ ಕಂಡುಬಂದಿದ್ದು, ಈ ಯೋಜನೆಗಾಗಿ 106.68 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಕೇವಲ 23.80 ಕೋಟಿ ರೂಪಾಯಿ ಅನುದಾನ ಮಾತ್ರ ಬಳಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments