Select Your Language

Notifications

webdunia
webdunia
webdunia
webdunia

ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿ ಬದಲಿಗೆ ಪದವೀಧರ ಶಿಕ್ಷಕರಿಗೆ ಬಡ್ತಿ

ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿ ಬದಲಿಗೆ ಪದವೀಧರ ಶಿಕ್ಷಕರಿಗೆ ಬಡ್ತಿ
bangalore , ಭಾನುವಾರ, 26 ಸೆಪ್ಟಂಬರ್ 2021 (17:58 IST)
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ರದ್ದುಪಡಿಸಿದೆ. ಪದವೀಧರ ಶಿಕ್ಷಕರಿಗೆ ಮಾತ್ರ ಪ್ರೌಢಶಾಲೆಗೆ ಬಡ್ತಿ ನೀಡಬಹುದು ಎಂದು ಹೇಳಲಾಗಿದೆ.
 
ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರು ಪ್ರೌಢ ಶಾಲಾ ಸಹ ಶಿಕ್ಷಕರ ಗ್ರೇಡ್-2 ಹುದ್ದೆಗೆ ಅರ್ಹರಲ್ಲ.
ಈ ಹುದ್ದೆಗೆ 6 ರಿಂದ 8 ನೇ ತರಗತಿಗೆ ಪಾಠ ಮಾಡುವ ಪದವೀಧರ ಶಿಕ್ಷಕರಿಗೆ ಮಾತ್ರ ಬಡ್ತಿ ನೀಡಬಹುದು ಎಂದು ಹೇಳಲಾಗಿದೆ.
 
ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರು ಹೈಸ್ಕೂಲ್ ಗೆ ಬಡ್ತಿ ಪಡೆದಿದ್ದಲ್ಲಿ ಕೂಡಲೇ ಹಿಂಬಡ್ತಿ ನೀಡಬೇಕು ಎಂದು ನ್ಯಾಯಮಂಡಳಿ ತಿಳಿಸಿದ್ದು, ಈ ಆದೇಶಕ್ಕೆ ತಡೆಯಾಜ್ಞೆ ಕೋರಿ ಶಿಕ್ಷಣ ಇಲಾಖೆಯಿಂದ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.
 
2016 -17 ನೇ ಸಾಲಿನಿಂದ ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲೆ ಸಹ ಶಿಕ್ಷಕರ ಹುದ್ದೆಗೆ ನೀಡಲಾಗಿರುವ ಎಲ್ಲಾ ಪದೋನ್ನತಿ ರದ್ದು ಮಾಡಬೇಕು. ಕೂಡಲೇ ಹಿಂಬಡ್ತಿ ನೀಡಬೇಕು ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ರೈತರು ಪ್ರತಿಭಟನೆ ಭಾರತ್ ಬಂದ್ ಗೆ ಕರೆ