Webdunia - Bharat's app for daily news and videos

Install App

ಸ್ಪಾಟ್ ನಲ್ಲಿ ದರ್ಶನ್ ಇದ್ದರು ಎನ್ನುವುದಕ್ಕೆ ಸಿಕ್ಕ ಸಾಕ್ಷ್ಯಗಳು

Krishnaveni K
ಶುಕ್ರವಾರ, 14 ಜೂನ್ 2024 (11:06 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ನಡೆದ ಶೆಡ್ ನಲ್ಲಿ ದರ್ಶನ್ ಕೂಡಾ ಇದ್ದರು ಎನ್ನುವುದಕ್ಕೆ ಪೊಲೀಸರು ಸಾಕ್ಷ್ಯ ಕಲೆ ಹಾಕಿದ್ದಾರೆ. ದರ್ಶನ್ ಮತ್ತು ಪವಿತ್ರಾ ಗೌಡ ಇದ್ದಿದ್ದರು ಎಂಬ ಸಾಕ್ಷ್ಯ ಕಲೆ ಹಾಕಿರುವ ಪೊಲೀಸರು ಕೇಸ್ ಇನ್ನಷ್ಟು ಸ್ಟ್ರಾಂಗ್ ಮಾಡಿದ್ದಾರೆ.

ಹತ್ಯೆ ನಡೆದಾಗ ನಾನು ಸ್ಥಳದಲ್ಲಿರಲಿಲ್ಲ. ನಾನೇನು ಮಾಡಿಲ್ಲ ಎಂದು ಹೇಳುತ್ತಿದ್ದ ದರ್ಶನ್ ವಿರುದ್ಧ ಪೊಲೀಸರು ಬಲವಾದ ಸಾಕ್ಷಿ ಕಲೆ ಹಾಕಿದ್ದಾರೆ. ಘಟನೆ ವೇಳೆ ದರ್ಶನ್, ಪವಿತ್ರಾ ಗೌಡ, ನವೀನ್ ಸೇರಿದಂತೆ ಪ್ರಮುಖ ಆರೋಪಿಗಳ ಮೊಬೈಲ್ ಇತ್ತು ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ. ಹತ್ಯೆ ನಡೆಸಿದ ಬಳಿಕ ಆರೋಪಿಗಳು ಪೊಲೀಸ್ ಅಧಿಕಾರಿಯೊಬ್ಬರ ಜೊತೆ ನಡೆಸಿದ ಮಾತುಕತೆಯ ವಿವರ ಲಭ್ಯವಾಗಿದೆ.

ಸರೆಂಡರ್ ಆಗುವುದಕ್ಕೆಂದು ಸಹಾಯಕರಿಗೆ ದರ್ಶನ್ ನೀಡಿದ್ದ ಹಣವನ್ನು ಜಪ್ತಿ ಮಾಡಲಾಗಿದೆ. ಕೃತ್ಯದ ಬಳಿಕ ಆರೋಪಿಗಳು ದರ್ಶನ್ ಗೆ ಪದೇ ಪದೇ ಕಾಲ್ ಮಾಡಿದ್ದ ವಿವರ ಲಭ್ಯವಾಗಿದೆ. ಅಲ್ಲದೆ, ಆರೋಪಿಗಳು ನೀಡಿದ ಹೇಳಿಕೆಯಂತೆ ದರ್ಶನ್ ಹೇಳಿದ್ದಕ್ಕೇ ರೇಣುಕಾಸ್ವಾಮಿಯನ್ನು ಕರೆತಂದು ಹಲ್ಲೆ ನಡೆಸಲಾಗಿದೆ ಎನ್ನುವುದು ಪಕ್ಕಾ ಆಗಿದೆ.

ಈ ಎಲ್ಲಾ ಸಾಕ್ಷ್ಯಗಳು ಈಗ ದರ್ಶನ್ ವಿರುದ್ಧ ಬಲವಾದ ಸಾಕ್ಷ್ಯ ನೀಡುತ್ತಿದೆ. ಒಂದು ವೇಳೆ ಹತ್ಯೆಯಾದ ಸಂದರ್ಭದಲ್ಲಿ ದರ್ಶನ್ ಸ್ಥಳದಲ್ಲಿ ಇಲ್ಲದೇ ಇದ್ದರೂ ಅವರ ಪಾತ್ರ ಈ ಪ್ರಕರಣದಲ್ಲಿ ದೊಡ್ಡದಾಗಿದೆ ಎನ್ನುವುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments