Webdunia - Bharat's app for daily news and videos

Install App

ಆಸ್ತಿ ವಿವಾದ: ಅಣ್ಣನ ಮಗನ ಮೇಲೆ ಗುಂಡು ಹಾರಿಸಿದ ಚಿಕ್ಕಪ್ಪ

Webdunia
ಶನಿವಾರ, 25 ಅಕ್ಟೋಬರ್ 2014 (15:09 IST)
ಆಸ್ತಿಗಾಗಿ ಸ್ವಂತ ಅಣ್ಣನ ಮಗನ ಮೇಲೆ ಚಿಕ್ಕಪ್ಪ ಫೈರಿಂಗ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗ್ರಾಮದಲ್ಲಿ ಸಂಭವಿಸಿದೆ.  ಶಿವನಗೌಡ ಊರಿಗೆ ಬಂದಿದ್ದ ಸಂದರ್ಭದಲ್ಲಿ ಚಿಕ್ಕಪ್ಪ ಕರಿಬಸವನಗೌಡ ಪಾಟೀಲ್  3 ಸುತ್ತು ಹಾರಿಸಿದ ಗುಂಡಿಗೆ ಗಾಯಾಳು ಎಎಸ್‌ಐ ಶಿವನಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದು ಎಕರೆ 18 ಗುಂಟೆ ಜಮೀನಿಗಾಗಿ ನಡೆದ ವಾದವಿವಾದ ಹಿಂಸಾತ್ಮಕ ತಿರುವು ಪಡೆಯಿತು. ಶಿವನಗೌಡ ಪುಣೆ ಠಾಣೆಯಲ್ಲಿ ಎಎಸ್‌ಐ ಆಗಿದ್ದರು. 1. 18 ಎಕರೆ ಜಮೀನನ್ನು ತನಗೆ ಬಿಟ್ಟುಕೊಡುವಂತೆ ಕರಿಬಸವನ ಗೌಡ ಒತ್ತಾಯಿಸಿದ್ದ.

ಆದರೆ ಅದಕ್ಕೆ ಶಿವನಗೌಡ ನಕಾರ ಸೂಚಿಸಿದ್ದರಿಂದ ಕೆರಳಿದ ಚಿಕ್ಕಪ್ಪ ಬಂದೂಕಿನಿಂದ ಗುಂಡು ಹಾರಿಸಿದ್ದ. ನೇಸರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments