Webdunia - Bharat's app for daily news and videos

Install App

ಜಮೀನಿಗಾಗಿ ಒಡಹುಟ್ಟಿದ ಅಣ್ಣನನ್ನೇ ಬರ್ಬರವಾಗಿ ಕೊಂದ ಪಾಪಿ ತಮ್ಮ

Webdunia
ಶುಕ್ರವಾರ, 9 ನವೆಂಬರ್ 2018 (07:16 IST)
ಹುಬ್ಬಳ್ಳಿ : ಜಮೀನಿಗಾಗಿ ವ್ಯಕ್ತಿಯೊಬ್ಬ ಒಡಹುಟ್ಟಿದ ಅಣ್ಣನನ್ನೇ ದೀಪಾವಳಿ ಹಬ್ಬದಂದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಕುಲ ಗ್ರಾಮದಲ್ಲಿ ನಡೆದಿದೆ.


ಭೀಮಶಿ ಬೆಂಗೇರಿ (36) ಕೊಲೆಯಾದ ದುರ್ದೈವಿ, ಬಸು ಬೆಂಗೇರಿ (34)  ಕೊಲೆ ಮಾಡಿದ ಆರೋಪಿ. ಇವರಿಬ್ಬರು ಇತ್ತೀಚೆಗಷ್ಟೇ ಜಮೀನನ್ನು ಭಾಗ ಮಾಡಿಕೊಂಡಿದ್ದರು. ಆದರೆ ಬಸು ಬೆಂಗೇರಿ ಕೇಳಿದ್ದ ಜಮೀನನ್ನು ಭೀಮಶಿ ಬಿಟ್ಟುಕೊಟ್ಟಿರಲಿಲ್ಲ. ಈ ಬಗ್ಗೆ ಇಬ್ಬರಿಗೂ ಆಗಾಗ ಜಗಳವಾಡುತ್ತಿದ್ದರು. ನಂತರ ಕಳೆದ ಎರಡು ದಿನಗಳ ಹಿಂದೆ ಗ್ರಾಮದ ಮುಖ್ಯಸ್ಥರು ಇವರಿಬ್ಬರ ನಡುವೆ ರಾಜಿ ಪಂಚಾಯಿತಿಯನ್ನು ನಡೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.


ಆದರೆ ಇದೀಗ ಈ ಜಗಳ ತಾರಕಕ್ಕೇರಿ ಸಿಟ್ಟಿಗೆದ್ದ ಬಸು ಗುರುವಾರ ತನ್ನ ಅಣ್ಣ ಭೀಮಶಿಯನ್ನು ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ . ಈ ಘಟನೆಯ ಬಳಿಕ ಆತ ಪೊಲೀಸರಿಗೆ ಶರಣಾಗಿದ್ದಾನೆ. ಈ ಪ್ರಕರಣ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments