12 ಕಡೆ ರೈಡ್ ವೇಳೆ ಸಿಕ್ಕಿದ್ದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ..!

Webdunia
ಬುಧವಾರ, 28 ಜೂನ್ 2023 (20:46 IST)
ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ  ಸಂಬಂಧಿಸಿದ ಸ್ಥಳಗಳ ಮೇಲೆ‌ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.. ಲೋಕಾಯುಕ್ತ ಎಸ್ ಪಿ ಕೆ.ವಿ. ಅಶೋಕ್ ನೇತೃತ್ವದಲ್ಲಿ ಅಜಿತ್ ಅವರ ಮನೆ ಹಾಗೂ ಇತರೆ ಹತ್ತು ಸ್ಥಳಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ...ಅಜಿತ್ ಅಣ್ಣನ ಮನೆಯಲ್ಲಿ 40ಲಕ್ಷ ಹಣ  ಪತ್ತೆಯಾಗಿದೆ. ಕೆ.ಆರ್.ಪುರ ತಹಶೀಲ್ದಾರ್ ಆಗಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಬಿಲ್ಡರ್ ಗಳಿಗೆ ತೆರವು ವಿಚಾರದಲ್ಲಿ ಸಹಕಾರ ನೀಡಿದ್ದಾರೆ... ಮತ್ತು ಕೆಲ ಪ್ರದೇಶದಲ್ಲಿ ಹೊತ್ತುವರಿ ಮಾಡಿಲ್ಲ ಎಂಬ ಆರೋಪದ ಮೇಲೆ ಸರ್ಕಾರ ಅವರನ್ನು ಅಮಾನತು ಮಾಡಿತ್ತು...ಇದಾದ ಬಳಿಕ ಮತ್ತೆ ಕೆ ಆರ್ ಪುರಂ ತಹಶಿಲ್ದಾರ್ ಅಗಿ ಹೋಗಿ ಕರ್ತವ್ಯ ನಿರ್ವಹಿಸುತ್ತಿದ್ದರು...ಸದ್ಯ ಕೆಲ ದಿನಗಳ ಹಿಂದೆ ವರ್ಗಾವಣೆಗೊಂಡಿದ್ದರು ಸರ್ಕಾರ ಈ ವರೆಗೆ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ ಈ ವೇಳೆ ಸಾಕಷ್ಟು ಐಷಾರಾಮಿ ಜೀವನ ಸಾಗಿಸುತಿದ್ದರು...ಇನ್ನೂ ಲೋಕಯುಕ್ತ ರೈಡ್ ವೇಳೆ ಇವರ ಬಳಿ ಸಿಕ್ಕಿರುವ ಐಷಾರಾಮಿ ಕಾರ್ ಹಾಗೂ ಬೆಲೆ ಬಾಳುವ ವಾಚ್ ಮತ್ತೆ ಲಿಕ್ಕರ್ ಬಾಟಲ್ ಗಳು ಇವರ ಲೈಪ್ ಸ್ಟೈಲ್ ತಿಳಿಸುತಿತ್ತು...ಇನ್ನು ಇದಕ್ಕೆ ಸಂಭಂದಿಸಿದಂತೆ ಇವರ ಆದಾಯದ ಮೂಲ ಮತ್ತು ಜೀವನ ಶೈಲಿ ನೋಡಿ ಲೋಕಯುಕ್ತ ಆಧಿಕಾರಿಗಳೇ ಒಮ್ಮೆ ಶಾಕ್ ಆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments