Webdunia - Bharat's app for daily news and videos

Install App

ಹೊರರಾಜ್ಯದ ಯುವತಿಯನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ರೌಡಿ ಅರೆಸ್ಟ್

Webdunia
ಸೋಮವಾರ, 9 ಆಗಸ್ಟ್ 2021 (22:38 IST)
ಕೆಲಸ ಕೊಡಿಸುವುದಾಗಿ ಪುಸಲಾಯಿಸಿ ಹೊರ ರಾಜ್ಯದ ಮಹಿಳೆಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ರೌಡಿಶೀಟರ್‍ವೊಬ್ಬನನ್ನು ಸಿಸಿಬಿ ವಿಶೇಷ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯಿದೆಯಡಿ ಬಂಧಿಸಿದ್ದಾರೆ. 
ಎಂ.ಎನ್. ನವೀನ್ (28) ಬಂಧಿತ ಆರೋಪಿ.  ಈತನು ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ನಗರದಲ್ಲಿ ನೆಲೆಸಿ, ತನ್ನ ಸಹಚರರ ಮೂಲಕ ಹೊರ ರಾಜ್ಯದ ಯುವತಿಯರನ್ನು ಕರೆತಂದು ಹೋಟೆಲ್, ಲಾಡ್ಜ್‍ಗಳಲ್ಲಿ ಇಡುತ್ತಿದ್ದ. ಬಳಿಕ ಹಣವಿರುವ ಗಿರಾಕಿಗಳಿಗೆ ಈ ಯುವತಿಯರನ್ನು ಕಳುಹಿಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು.
ಆರೋಪಿ ವಿರುದ್ಧ ಜಯನಗರ, ಜೆಪಿನಗರ, ಕೆಎಸ್ ಲೇಔಟ್, ಬಾಣಸವಾಡಿ ಪೆÇಲೀಸ್ ಠಾಣೆಗಳಲ್ಲೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ. 
ನವೀನ್ ಜೈಲಿಗೆ ಹೋಗಿ ಬಂದ ಬಳಿಕವೂ ದಂಧೆ ಮುಂದುವರಿಸಿದ್ದ. ಹಾಗಾಗಿ, ಈತನನ್ನು ಗೂಂಡಾ ಕಾಯಿದೆಯಡಿಯಲ್ಲಿ ಬಂಧಿಸಲು ಸಿಸಿಬಿ ಅಧಿಕಾರಿಗಳು ವರದಿ ಸಲ್ಲಿಸಿದ್ದರು. ಸಿಸಿಬಿ ಅಧಿಕಾರಿಗಳ ವರದಿಯನ್ನು ಅಪರಾಧ ವಿಭಾಗದ ಡಿಸಿಪಿ ಕೆ.ಪಿ. ರವಿಕುಮಾರ್ ಹಾಗೂ ಜಂಟಿ ಪೆÇಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಈತನ ಬಂಧನಕ್ಕೆ ಶಿಫಾರಸು ಮಾಡಿದ್ದರು. ಅದರಂತೆ, ನಗರ ಪೆÇಲೀಸ್ ಆಯುಕ್ತ ಕಮಲ್‍ಪಂತ್ ಅವರು ಆರೋಪಿಯನ್ನು ಗೂಂಡಾ ಕಾಯಿದೆಯಡಿ ಬಂಧಿಸುವಂತೆ ಆದೇಶಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments