ಉದ್ಯಮಿ ಕಿರಣ್ ಮಜುಂದಾರ್ ಷಾ ವಿರುದ್ಧ ಬೀದಿಗಿಳಿದ ಕನ್ನಡ ಪರ ಸಂಘಟನೆಗಳ ಸದಸ್ಯರು

Webdunia
ಮಂಗಳವಾರ, 10 ಜುಲೈ 2018 (15:08 IST)
ಕನ್ನಡ ಹೋರಾಟಗಾರರಿಗೆ ಶಿಕ್ಷಣ ಹಾಗೂ ಉದ್ಯೋಗದ ಬಗ್ಗೆ ಅರಿವಿಲ್ಲ ಎಂಬ ಹೇಳಿಕೆಯನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದ ಉದ್ಯಮಿ ವಿರುದ್ಧ  ಕನ್ನಡ ಜಾಗೃತಿ ವೇದಿಕೆಯ ಕಾರ್ಯಕರತರು ಪ್ರತಿಭಟನೆ ನಡೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಾಗೋಡಿಯಲ್ಲಿರುವ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಉದ್ಯಮಿ ಕಿರಣ್ ಮಜುಂದಾರ್ ಶಾ  ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡ ಹೋರಾಟಗಾರು ಹಾಗೂ ಕನ್ನಡ ಶಿಕ್ಷಣ ತಜ್ಞರನ್ನು ಕಿಡಿಗೇಡಿಗಳು ಮತ್ತು ಇವರಿಗೆ ಶಿಕ್ಷಣ ಹಾಗೂ ಉದ್ಯೋಗದ ಬಗ್ಗೆ ಅರಿವಿಲ್ಲದವರೆಂದು ಬರಹವನ್ನು ಪೋಸ್ಟ್ ಮಾಡಿದ್ದರು.
ಇಂದನ್ನು  ಖಂಡಿಸಿ  ಅವರ ಬಯೋಕಾನ್ ಸಂಸ್ಥೆಯ ಮುಂಬಾಗದಲ್ಲಿ ಕನ್ನಡ ಜಾಗೃತಿ ವೇದಿಕೆ  ಪ್ರತಿಭಟನೆ ಹಮ್ಮಿಕೊಂಡು, ಅವರ ಭಾವ ಚಿತ್ರವನ್ನು  ತುಳಿದು ಬೆಂಕಿ ಹಚ್ಚಿ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು, ಇನ್ನು ಈ ಕೂಡಲೇ ಕನ್ನಡ ಶಿಕ್ಷಣ ತಜ್ಞರು ಹಾಗೂ ಕನ್ನಡ ಹೋರಾಟಗಾರರಲ್ಲಿ  ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಮಜುಂದಾರ್ ಶಾಗೆ ಎಚ್ಚರಿಕೆ ನೀಡಿದರು.
ಕನ್ನಡ ನಾಡಿನಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂದು ಇದೀಗ ಕನ್ನಡಿಗರನ್ನೇ ಅವಮಾನಿಸುತ್ತಿರುವ ಮಜುಂದಾರ್ ಶಾರವರ ಬಯೋಕಾನ್ ಸಂಸ್ಥೆಯನ್ನು ವಿದೇಶಗಳು ಬಹಿಷ್ಕರಿಸಿದದ್ದವು. ಅಂತಹ ಕಂಪೆನಿಯನನ್ನು ಕನ್ನಡಿಗರ ಕಂಪೆನಿಯೆಂದು ಕರ್ನಾಟಕದಲ್ಲಿ ನೆಲ ಜಲ ಕೊಟ್ಟು ಕಾಪಾದಿದ್ದಕ್ಕೆ ಇದೀಗ ಕನ್ನಡಿಗರನ್ನೇ ಅವಹೇಳನ ಮಾಡುತ್ತಿದ್ದಾರೆ. ಇನ್ನು  ಬಯೋಕಾನ್ ಕಂಪನಿಯಿಂದ ಹೆಬ್ಬಗೋಡಿ ಸುತ್ತ ಮುತ್ತ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಕನ್ನಡಿಗರನ್ನು ಅವಮಾನಿಸಿರುವ ಕಿರಣ್ ಮಜುಂದಾರ್ ಶಾರವರನ್ನು ಕೂಡಲೇ ಮುಖ್ಯಮಂತ್ರಿಗಳು ರಾಜ್ಯದಿಂದ ಬಾಹಿಷ್ಕಾರ ಮಾಡಿ ಅವರ ಕಂಪನಿಗೆ ನೀಡಿರುವ ಸವಲತ್ತುಗಳನ್ನು ಹಿಂಪಡೆಯಬೇಕು ಎಂದು  ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ video

ಯಾವ ವೈದ್ಯರನ್ನು ನಂಬಬೇಕೋ ಗೊತ್ತಾಗದಂತಾಗಿದೆ : ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments