Publish Date: Tue, 18 Dec 2018 (14:59 IST)
Updated Date: Tue, 18 Dec 2018 (15:02 IST)
ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಜಗದೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.
ದನಕರುಗಳೊಂದಿಗೆ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಬಗರ್ ಹುಕುಂ ಸಾಗುವಳಿ ಚೀಟಿ ನೀಡುವಲ್ಲಿ ತಾರತಮ್ಯ ಮಾಡಿರುವ ಆರೋಪ ಮಾಡಿರುವ ಪ್ರತಿಭಟನಕಾರರು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ರೈತರಿಗೆ ಮಂಜೂರು ಚೀಟಿ ತಡೆ ಹಿಡಿದಿರುವ ಆರೋಪ ಮಾಡಿದ್ದಾರೆ. ಜೆಡಿಎಸ್ ಮುಖಂಡರು, ರೈತರಿಂದ ತಾಲ್ಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಿತು.