Select Your Language

Notifications

webdunia
webdunia
webdunia
webdunia

ಎಂ.ಎಂ.ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರು ಬಹಿರಂಗಪಡಿಸಲು ಆಗ್ರಹಿಸಿ ಪ್ರತಿಭಟನೆ

ಎಂ.ಎಂ.ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರು ಬಹಿರಂಗಪಡಿಸಲು ಆಗ್ರಹಿಸಿ ಪ್ರತಿಭಟನೆ
ಗದಗ , ಗುರುವಾರ, 30 ಆಗಸ್ಟ್ 2018 (18:17 IST)
ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಚಿಂತಕರು ಪ್ರತಿಭಟನೆ ನಡೆಸಿದ್ದಾರೆ.

 ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರನ್ನು ಬಹಿರಂಗಪಡಿಸಬೇಕು ಎಂದು ಗದಗನಲ್ಲಿ ಪ್ರಗತಿಪರ ಚಿಂತಕರು, ಬುದ್ದಿಜೀವಿಗಳು ಪ್ರತಿಭಟನೆ ನಡೆಸಿದ್ದಾರೆ.

ಬಂಧಿತ ಆರೋಪಿಗಳು ಆರ್‌.ಎಸ್.ಎಸ್. ಸಂಘಟನೆಯವರಾಗಿದ್ದಲ್ಲಿ ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ ಇದರ ಪಾಲುದಾರರಾಗುತ್ತಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಆರ್.ಎಸ್.ಎಸ್ ನ ಎಲ್ಲರೂ ಈ ಹತ್ಯೆಯ ಪಾಲುದಾರರಾಗುತ್ತಾರೆ ಎಂದು ಗದಗನಲ್ಲಿ ಚಿಂತಕ ಬಸವರಾಜ ಸೂಳಿಭಾವಿ ಹೇಳಿಕೆ ನೀಡಿದ್ದಾರೆ.

ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು. ಕೇವಲ ಕೊಲೆಗಾರರ ಮೇಲೆ ಕ್ರಮ ಕೈಗೊಂಡರೆ ಸಾಲದು. ಕೊಲೆಗಾರರ ಹಿಂದಿನ ಶಕ್ತಿ ಹಾಗೂ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿಲ್ಲ. ಆದ್ರೆ ವಿಚಾರವಾದಿಗಳನ್ನು ಬಂಧಿಸುವ ಮೂಲಕ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ತೀವ್ರ ಆರೋಪವನ್ನು ಮಾಡಿದರು.






Share this Story:

Follow Webdunia kannada

ಮುಂದಿನ ಸುದ್ದಿ

ಸ್ಥಳೀಯ ಚುನಾವಣೆಗೆ ಜಿಲ್ಲಾಡಳಿತ ಸಜ್ಜು