Webdunia - Bharat's app for daily news and videos

Install App

ಉರ್ದು ಬೋರ್ಡ ಉಳಿಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Webdunia
ಸೋಮವಾರ, 14 ಜನವರಿ 2019 (19:06 IST)
ಕಲಬುರಗಿ ಮಹಾನಗರ ಪಾಲಿಕೆ ನೂತನ ಕಟ್ಟಡದ ಮೇಲೆ ಉರ್ದು ಬೋರ್ಡ್ ಉಳಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ.

ಕಲಬುರಗಿ ಮಹಾನಗರ ಪಾಲಿಕೆ ನೂತನ ಕಟ್ಟಡ ಎದುರು ಸಿಪಿಐ(ಎಂ) ಕಾರ್ಯಕರ್ತರು ಧರಣಿ ನಡೆಸಿದರು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ, ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಅಧಿಕೃತ ಭಾಷಾ) ಕಾಯ್ದೆ 1981ರಂತೆ ಕಲಂ 2ಬಿ ಪ್ರಕಾರ ಉರ್ದು ಭಾಷೆ ಬಳಕೆಗೆ ಅವಕಾಶವಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ವೋಟ್ ಬ್ಯಾಂಕ್‌ಗಾಗಿ ಉರ್ದು ಬೋರ್ಡ್‌ಗೆ ಬಿಜೆಪಿ ವಿರೋಧಿಸುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಉರ್ದು ಬೋರ್ಡ್‌ಗೆ ವಿರೋಧಿಸುತ್ತಿದ್ದಾರೆಂದು ಆರೋಪಿಸಿದ ಅವರು, ಯಾವುದೇ ಕಾರಣಕ್ಕೂ ಪಾಲಿಕೆ ಕಚೇರಿ ಮೇಲಿನ ಉರ್ದು ಬೋರ್ಡ್ ತಗೆಯದಂತೆ ಮನವಿ ಮಾಡಿದರು.  ಉರ್ದು ಬೋರ್ಡ್ ಅಳವಡಿಕೆ ಕುರಿತು ಪರ- ವಿರೋಧ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ನೂತನ ಕಟ್ಟಡಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments