ಕೃಷಿ ವಿರೋಧಿ ವಿರುದ್ಧ ಹೋರಾಟ

Webdunia
ಶನಿವಾರ, 12 ಮಾರ್ಚ್ 2022 (18:08 IST)
ಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಪಡಿಸಬೇಕೆಂದು ಆಗ್ರಹಿಸಿ ಮಾ.21ರಿಂದ ಮೂರು ದಿನಗಳ ಕಾಲ ರಾಜ್ಯ ರೈತ ಸಂಘದಿಂದ ಬೃಹತ್‌ ಬೆಂಗಳೂರು ಚಲೋ ಮತ್ತು ಪರ್ಯಾಯ ಜನಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್‌ ಪುಣಚ ತಿಳಿಸಿದರು.
ಶುಕ್ರವಾರ ನಗರದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.21ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಬೃಹತ್‌ ಅಧಿವೇಶನ ಮತ್ತು ಮಾ.22 ಮತ್ತು 23ರಂದು ಪರ್ಯಾಯ ಜನಾಧಿವೇಶನವನ್ನು ಆಯೋಜಿಸಲಾಗಿದೆ. ಈ ಅಧಿವೇಶನದಲ್ಲಿ ಜಿಲ್ಲೆಯ ರೈತರು, ದಲಿತ, ಕಾರ್ಮಿಕರು, ಮಹಿಳೆಯರು ಯುವ ಜನತೆ ಪಾಲ್ಗೊಳ್ಳುವಂತೆ ವಿನಂತಿಸಿದರು.
 
ರೈತ ವಿರೋಧಿ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದುಕೊಂಡಿದೆ. ಆದರೆ, ರಾಜ್ಯ ಸರ್ಕಾರ ಎಂಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂಪಡೆದುಕೊಂಡಿಲ್ಲ, ಈ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ಸಂಘಟನೆಗಳ ಐಕ್ಯ ವೇದಿಕೆ ಸಂಯುಕ್ತ ಹೋರಾಟ ಹಮ್ಮಿಕೊಂಡಿದೆ ಎಂದರು.
 
ಈ ಹಿಂದೆ ರೈತರಿಗೆ ಅನುಕೂಲವಾಗುವ ಕಾಯ್ದೆಗಳನ್ನು ತರುವಂತೆ ಹೋರಾಟ ಮಾಡಲಾಗುತ್ತಿತ್ತು. ಆದರೆ ಇಂದು ರೈತ ವಿರೋಧಿ  ಮಸೂದೆಗಳನ್ನು ಹಿಂಪಡೆಯುವಂತೆ ಹೋರಾಟ ಮಾಡುವ ಸ್ಥಿತಿ ಬಂದಿರುವುದು ಶೋಚನೀಯ ಎಂದು ವಿಷಾದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾನಿಪೂರಿ ಪಾನಿಯೊಳಗಿನಿಂದ ಹಾರಿದ ಜೀವಿ ನೋಡಿದ್ರೆ ಇನ್ನು ಗೋಲ್ ಗಪ್ಪಾ ತಿನ್ನಲೂ ಭಯಪಡ್ತೀರಿ Video

ಟ್ರಕ್ ಮೇಲೆ ಕೂತಿದ್ದ ವ್ಯಕ್ತಿಗೆ ಹೈಟೆನ್ಷನ್ ತಂತಿ ತಗುಲಿದ ಭಯಾನಕ ವಿಡಿಯೋ

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ನಾಟಕ ಎಂದ ಆರ್ ಅಶೋಕ್

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments