Webdunia - Bharat's app for daily news and videos

Install App

ಹಿಂದಿ ದಿವಸ್ ವಿರುದ್ಧ ಹೆಚ್. ಡಿ. ಕೆ. ಪ್ರತಿಭಟನೆ

Webdunia
ಬುಧವಾರ, 14 ಸೆಪ್ಟಂಬರ್ 2022 (17:04 IST)
ರಾಜ್ಯ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡದಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬುಧವಾರದಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜೆಡಿಎಸ್‌ನಿಂದ ಪ್ರತಿಭಟನೆ ನಡೆಸಲಾಗಿದೆ.
ಜೆಡಿಎಸ್‌ ಮುಖಂಡರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.
 
ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದರು.
 
ಕೇಂದ್ರ ಸರ್ಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
 
ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರ್ಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿರುವುದು ಸರಿಯಲ್ಲಿ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಮುಂದಿನ ಸುದ್ದಿ
Show comments