Webdunia - Bharat's app for daily news and videos

Install App

ಅಕ್ರಮ ಸಾರಾಯಿ ಮಾರಾಟ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Webdunia
ಮಂಗಳವಾರ, 4 ಸೆಪ್ಟಂಬರ್ 2018 (15:29 IST)
ಅಕ್ರಮ ಸಾರಾಯಿ ದಾಸ್ತಾನು ಹಾಗೂ ಮಾರಾಟದ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಕಾರವಾರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಇಟಗಿಯಲ್ಲಿ ಜರುಗಿದೆ.

ಹಲವಾರು ವರ್ಷಗಳಿಂದ ಅಕ್ರಮ ಸಾರಾಯಿ ಜಾಲ ತಾಲೂಕಿನಾದ್ಯಂತ ತಲೆ ಎತ್ತಿದ್ದು, ಇದನ್ನು ತಡೆಯಬೇಕಾದ ಅಬಕಾರಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಈ ಅಕ್ರಮ ಸಾರಾಯಿಯಿಂದ ಇಲಾಖೆಗೂ ಹಣ ಸಂದಾಯವಾಗುತ್ತಿದ್ದು, ಇಲಾಖೆ ಕೂಡ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ನಾವು ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಿದರೂ ಕೂಡ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ. ಇಟಗಿ ಗ್ರಾಮ ಪಂಚಾಯತ್ ಅಧ್ಯಕ್ಷನೇ ಸ್ವತಃ ಈ ಕೆಲಸ ಮಾಡುತ್ತಿದ್ದು, ಇನ್ನು 10 ದಿನದೊಳಗಾಗಿ ಈ ದಂಧೆ ಯನ್ನು ನಿಲ್ಲಿಸಿ ಅವರನ್ನು ಬಂಧಿಸಬೇಕು.

ಇಲ್ಲದಿದ್ದರೆ ಉಗ್ರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು. ಈ ಕುರಿತು ಗ್ರಾಮ ಪಂಚಾಯತ್, ಅಬಕಾರಿ ನಿರೀಕ್ಷಕರು ಹಾಗೂ ಪೊಲೀಸ್ ಇಲಾಖೆಗೆ ಮನವಿಯನ್ನು ಕೂಡ ಸಲ್ಲಿಸಲಾಯಿತು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments