Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ

Webdunia
ಗುರುವಾರ, 5 ಜುಲೈ 2018 (15:35 IST)
8 ವರ್ಷದ ಬಾಲಕಿ ದಿವ್ಯಾ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ನಾವುಂದ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. 
 
ನಾವುಂದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಪಿಯು ಕಾಲೇಜು ಹಾಗೂ ನಾವುಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
 
ಕಾಲೇಜಿನಿಂದ ರ್ಯಾಲಿ ಮೂಲಕ ಹೊರಟ ವಿದ್ಯಾರ್ಥಿಗಳು ಕುಂದಾಪುರದ  ನಾವುಂದ ಪಂಚಾಯತ್ ಗೆ ತೆರಳಿ  ಮನವಿ ಸಲ್ಲಿಸಿದರು.
 
ವಿದ್ಯಾರ್ಥಿನಿಗಳಾದ ಸುನೀತಾ ಹಾಗೂ ಅನುಷಾ ಮಾತನಾಡಿ ಅತ್ಯಾಚಾರವೆಸಗುವ ಕಾಮುಕರಿಗೆ ವಿದೇಶಗಳಲ್ಲಿರುವಂತೆ ಉಗ್ರವಾದ ಶಿಕ್ಷೆ ನೀಡುವಂತಹ ಉಗ್ರ ಕಾನೂನುಗಳನ್ನು ರೂಪಿಸಬೇಕು. ಹೀಗಾದ್ದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳು ನಡೆಯುವುದಿಲ್ಲ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. 
 
ಪ್ರತಿಭಟನೆಯ ಮುಂದಾಳತ್ವವನ್ನು ಸುಪ್ರೀತ್, ಕಾರ್ತಿಕ್, ಭಾರ್ಗವ್, ಪ್ರಣೀತ್, ಮನೋಜ, ಅನುಪಮಾ, ರಕ್ಷಿತಾ ವಹಿಸಿದ್ದರು.
 
ಬೈಂದೂರು ಸಿಪಿಐ ಪರಮೇಶ್ವರ್ ಗುನಗಾ, ಪಿಎಸ್ಐ ತಿಮ್ಮೇಶ್ ಬಿ.ಎನ್ ಬಂದೋಬಸ್ತ್ ಏರ್ಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments