Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

Webdunia
ಬುಧವಾರ, 9 ಆಗಸ್ಟ್ 2023 (13:32 IST)
ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ.ಕೃಷಿ ಸುಧಾರಣಾ ಕಾಯ್ದೆ ವಾಪಸ್, ಎಪಿಎಂಸಿ ಕಾಯ್ದೆ ವಾಪಸ್ ಸೇರಿ ರೈತ ಸಂಬಂಧಿ ಯೋಜನೆಗಳನ್ನು ರಾಜ್ಯ ಬಜೆಟ್‌ನಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿದ್ದು,ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
 
ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದಂತೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಈ ವೇಳೆ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವು ತಳೆದಿದೆ.ನಾವು ಬೆಳೆ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆವು.ಅಡೆತಡೆಯಿಲ್ಲದೆ ರೈತರ ಮಾರಾಟಕ್ಕೆ ಅವಕಾಶ ನೀಡಿದ್ದೆವು.ಮಧ್ಯವರ್ತಿ ಹಾವಳಿ ತಪ್ಪಿಸುವ ಕೆಲಸ ಮಾಡಿದ್ದೆವು  ಇದಕ್ಕೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕಿದೆ.ಸಣ್ಣ ನೀರಾವರಿ ಯೋಜನೆ ಕುಂಠಿತಗೊಂಡಿವೆ.ಜನವಿರೋಧಿ ಸರ್ಕಾರದಿಂದ ಏನನ್ನ ಬಯಸಬಹುದು?೧೩೭ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೇವಲ ಒಬ್ಬರಿಗೆ ಪರಿಹಾರ ನೀಡಿದ್ದಾರೆ.ಕೇವಲ ೩೭ ಅರ್ಜಿಗಳ ವಿಲೇವಾರಿ ಆಗಿದೆ.ಡಿಸಿಎಂ ಒಬ್ಬ ರೈತರ ಮನೆಗೆ ಹೋಗಿದ್ದಾರಾ?ಎಲ್ಲ ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ.ಸರ್ಕಾರ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ಮಾಡ್ತಿದೆ.ರೈತ ಕುಟುಂಬಗಳ ಮೇಲೆ ಅನ್ಯಾಯ ಮಾಡ್ತಿದೆ ಎಂದು ಸರ್ಕಾರದ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments