Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳಿಂದ ಪ್ರತಿಭಟನೆ: ಶಿಕ್ಷಣ ಸಚಿವರ ನೇಮಕಕ್ಕೆ ಒತ್ತಾಯ

ವಿದ್ಯಾರ್ಥಿಗಳಿಂದ ಪ್ರತಿಭಟನೆ: ಶಿಕ್ಷಣ ಸಚಿವರ ನೇಮಕಕ್ಕೆ ಒತ್ತಾಯ
ವಿಜಯಪುರ , ಗುರುವಾರ, 13 ಡಿಸೆಂಬರ್ 2018 (17:27 IST)
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಉಳಿವಿಗಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲಾ ಎಬಿವಿಪಿ ಘಟಕದಿಂದ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಮೂಲಕ ಮನವಿ ಮಾಡಲಾಯಿತು. ನಗರದ ಗಾಂಧಿ ವೃತ್ತದ ಬಳಿ‌ ಜಮಾಯಿಸಿದ್ದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಚಿವರನ್ನು ತಕ್ಷಣ ನೇಮಿಸಬೇಕು.

ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಕರನ್ನು ನೇಮಿಸಬೇಕು ಎಂದು ಪ್ರತಿಭಟನೆ ಮಾಡಲಾಯಿತು. ಸಚಿವರು ಹಾಗು ನಿರ್ದೇಶಕರಿಲ್ಲದೆ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳಲ್ಲಿ ಭಾರೀ ತೊಂದರೆಯಾಗುತ್ತಿದೆ. ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹ ಪಡಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ದಿನ ಎರಡು ಕೊಲೆಗಳು: ಬೆಚ್ಚಿಬಿದ್ದ ಜನತೆ