Select Your Language

Notifications

webdunia
webdunia
webdunia
webdunia

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ
bangalore , ಬುಧವಾರ, 1 ಡಿಸೆಂಬರ್ 2021 (20:13 IST)
ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. 400 ರಾಂಕ್ ವಿದ್ಯಾರ್ಥಿಗಳಲ್ಲಿ ಮೊದಲ ಆದ್ಯತೆ ಬಿಸಿಯು ಯನಿವರ್ಸಿಟಿಯ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ. ಎಂಎಸ್​ಸಿ, ಕೆಮೆಸ್ರ್ಟಿ, ಅಪ್ಲೀಕೇಷನ್​ಗಾಗಿ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿ ವಾಗ್ವಾದ ಉಂಟಾಗಿದೆ. ರಾಂಕ್ ಲಿಸ್ಟ್ ಪ್ರಕಾರ ಸೀಟ್ ಅಲಾಟ್ ಆಗಲಿ ಎಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ ವ್ಯಕ್ತವಾಗಿ: ಬೆಂಗಳೂರು ವಿವಿ ತ್ರಿಭಜನೆ ಆಪತ್ತು ತಂದಿದೆ ಎಂದು ಹೇಳಲಾಗುತ್ತಿದೆ. ಬಿಎಸ್​ಸಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಬಿಎಸ್​ಸಿ ಬಳಿಕ ಎಮ್​ಎಸ್​ಸಿ ವ್ಯಾಸಾಂಗ ಮಾಡಲು ಕಾಲೇಜುಗಳೇ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೆ, ಬೆಂಗಳೂರು ಉತ್ತರ ವಿವಿಯಲ್ಲಿ ಎಮ್​ಎಸ್​ಸಿ ರಸಾಯನಶಾಸ್ತ್ರದಲ್ಲಿ ಯಾವುದೇ ಕಾಲೇಜುಗಳು ಇಲ್ಲ. ಹೀಗಾಗಿ ಬೆಂಗಳೂರು ಕೇಂದ್ರ ವಿವಿಗೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ.
 
ಮೊದಲು ಎಲ್ಲಾ ವಿದ್ಯಾರ್ಥಿಗಳಿಗೂ ಅಪ್ಲಿಕೇಷನ್ ಕೊಟ್ಟಿದ್ದ ಬೆಂಗಳೂರು ಸೆಂಟ್ರಲ್ ವಿವಿ, ಇಂದು ಮೊದಲನೇ ದಿನದ ಕೌನ್ಸಿಲಿಂಗ್​ಗೆ ವಿದ್ಯಾರ್ಥಿಗಳನ್ನು ಬರೋಕೆ ಹೇಳಿತ್ತು. ಆದರೆ ಮೊದಲು ನಮ್ಮ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ಎಂದು ಬೆಂಗಳೂರು ಸೆಂಟ್ರಲ್ ವಿವಿ ಹೇಳುತ್ತಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಬಿಎಸ್​ಸಿ ವ್ಯಾಸಾಂಗ ಮಾಡಿದ್ದರು. ಈಗ ಆ ವಿದ್ಯಾರ್ಥಿಗಳು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಬೆಂಗಳೂರು ಕೇಂದ್ರ ವಿವಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೂಸ್ಟರ್ ಬಗ್ಗೆ ಕೇಂದ್ರ ಮಟ್ಟದಲ್ಲಿ ಚರ್ಚೆ