Publish Date: Wed, 01 Mar 2023 (07:41 IST)
Updated Date: Wed, 01 Mar 2023 (09:39 IST)
ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳು ಹಾಗೂ ಶಾಲಾ, ಕಾಲೇಜುಗಳಿಗೂ ಇದರ ಪರಿಣಾಮ ತಟ್ಟಲಿದೆ.
ಕಳೆದ ಕೆಲವು ತಿಂಗಳಿನಿಂದ ಏಳನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ ರದ್ದು ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯನ್ನು ತೀವ್ರವಾಗಿ ನಡೆಸಲು ನಾಳೆ ನಿರ್ಧರಿಸಿದ್ದಾರೆ.
ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದರೇ ಮಾತ್ರ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ. ನಾಳೆಯೊಳಗೆ ಸರ್ಕಾರ ಆದೇಶ ಹೊರಡಿಸದೇ ಇದ್ದರೆ 6 ಲಕ್ಷ ಉದ್ಯೋಗಿಗಳು ಪ್ರತಿಭಟನೆ ಮಾಡುವ ಸಾಧ್ಯತೆಯಿದೆ.