ಎಸ್‍ಐ ಪರ ಸುರಿವ ಮಳೆಯಲ್ಲಿಯೂ ಪ್ರತಿಭಟನೆ ನಡೆಸಿದ ಸಂಘಟನೆಗಳು

Webdunia
ಶನಿವಾರ, 7 ಜುಲೈ 2018 (17:20 IST)
ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಕರ್ತವ್ಯಕ್ಕೆ ಗೈರಾಗಿರುವ ಹೆಬ್ರಿ ಠಾಣಾ ಎಸ್‍ಐ ಮಹಾಬಲ ಶೆಟ್ಟಿ ಅವರ ಮನವೊಲಿಸುವಂತೆ ಆಗ್ರಹಿಸಿ ಹೆಬ್ರಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆದಿದೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹೆಬ್ರಿಯ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಬ್ರಿ ಠಾಣೆಯ ಎದುರು ಜಮಾಯಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಕುರಿತು ಧಿಕ್ಕಾರ ಕೂಗಿದ್ರು. ಹೆಬ್ರಿ ಠಾಣೆಗೆ ದಕ್ಷ ಅಧಿಕಾರಿ ಮಹಾಬಲ ಶೆಟ್ಟಿ ಅವರು ಬೇಕು. ಯಾವುದೇ ಕಾರಣಕ್ಕೂ ಮಹಾಬಲ ಶೆಟ್ಟಿ ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು.

ಸೋಮವಾರದ ಒಳಗಾಗಿ ನ್ಯಾಯ ಸಿಗದೆ ಹೋದಲ್ಲಿ ಹೆಬ್ರಿ ಪೇಟೆ ಬಂದ್ ಮಾಡಿ ಪ್ರತಿಭಟಿಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಪ್ರಸನ್ನ ಕುಮಾರ್ ಎಚ್ಚರಿಸಿದ್ರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಜಾಯ್ ಅಂತೊನಿ, ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಅವರೊಂದಿಗೆ ಮಾತನಾಡಿ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ರಿಕ್ಷಾ ಚಾಲಕ ಮಾಲಕರ ಸಂಘ, ಟ್ಯಾಕ್ಸಿ ಯೂನಿಯನ್ ಹಾಗೂ ಹೆಬ್ರಿ ನಾಗರಿಕರು ಭಾಗವಹಿಸಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments