Webdunia - Bharat's app for daily news and videos

Install App

ಪೂರೈಕೆಯಾಗದ ಕುಡಿಯುವ ನೀರು: ಅಧಿಕಾರಿಗಳನ್ನು ಪಂಚಾಯ್ತಿಯಲ್ಲೇ ಕೂಡಿಹಾಕಿದ ಗ್ರಾಮಸ್ಥರು

Webdunia
ಸೋಮವಾರ, 6 ಆಗಸ್ಟ್ 2018 (18:29 IST)
ಕುಡಿಯುವ ನೀರು ಪೂರೈಕೆಯಾಗದ ಹಿನ್ನಲೆ ಗ್ರಾಮ ಪಂಚಾಯತ ಸದಸ್ಯರು ಹಾಗೂ ಅಧಿಕಾರಿಗಳನ್ನ ಕೂಡಿಹಾಕಿ ಬೀಗ ಜಡಿದು ಪ್ರತಿಭಟನೆಗೆ ಮುಂದಾಗಿರುವ ಘಟನೆ ನಡೆದಿದೆ.

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಸರಿಯಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಬೇಸತ್ತ ಸ್ಥಳೀಯರು ಪಂಚಾಯತಿಗೆ ಮುತ್ತಿಗೆ ಹಾಕಿ ಕಚೇರಿ ಮುಂದೆ ಟಾಯರ್ ಸುಟ್ಟು ಪ್ರತಿಭಟನೆ ಮಾಡಿದರು. ಹನಿ ನೀರಿಗೂ ಹಾಹಾಕಾರ ಪಡುವಂತಹ ಪರಿಸ್ಥಿತಿ ಗ್ರಾಮದಲ್ಲಿ ಎದುರಾಗಿದೆ. ಊರ ಅಕ್ಕಪಕ್ಕ ತೋಟದಲ್ಲಿನ ಬಾವಿಗಳ ನೀರಿಗೆ ಅವಲಂಬಿತರಾಗಿದ್ದಾರೆ. ಮಹಿಳೆಯರು, ವೃದ್ಧರು, ಮಕ್ಕಳು ಸಾಕಷ್ಟು ನೀರಿಗಾಗಿ ಹರಸಾಹಸ ಪಡುವಂತಾಗಿದೆ.

ಇದರಿಂದ ರೋಸಿಹೋದ ಸಾರ್ವಜನಿಕರು ಗ್ರಾಮಪಂಚಾಯತ ಸದಸ್ಯರು ಹಾಗೂ ಅಧಿಕಾರಿಗಳನ್ನ ಕೊಠಡಿಯೊಳಗೆ ಕೂಡಿಹಾಕಿ ಧಿಕ್ಕಾರ ಕೂಗಿದರು. ಸ್ಥಳಕ್ಕೆ ಡಿಸಿ, ತಹಶೀಲ್ದಾರ್ ಬರುವಂತೆ ಪಟ್ಟು ಹಿಡಿದರು. ಪಂಚಾಯತಿ ಮುಂದೆ ಗಾಂಧಿ ಫೋಟೋ ಜೊತೆ ಖಾಲಿ ಕೊಡಗಳೊಂದಿಗೆ ತಮ್ಮ ಆಕ್ರೋಶ ಹೊರಹಾಕಿದರು. ಗಂಭೀರ ಸಮಸ್ಯೆ ಬಗ್ಗೆ ಗಮನ ಹರಿಸದ ಅಧಿಕಾರಿಗಳು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments